ದೇಶ- ವಿದೇಶ

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ೧೦೦ ಹೊಸ ಅಟಲ್ ಕ್ಯಾಂಟೀನ್‌ಗಳನ್ನು ಆರಂಭಿಸಿದೆ.

ಈ ಕ್ಯಾಂಟೀನ್‌ಗಳಲ್ಲಿ ಕೇವಲ ೫ ರೂ.ಗೆ ಊಟ ಸಿಗಲಿದೆ. ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಲಾಜಪತ್ ನಗರದ ನೆಹರೂ ನಗರದಲ್ಲಿ ಮೊದಲ ಕ್ಯಾಂಟೀನ್‌ನ ಉದ್ಘಾಟನೆ ನೆರವೇರಿಸಿದರು.

ನಗರಾಭಿವೃದ್ಧಿ ಸಚಿವ ಆಶಿಷ್ ಸೂದ್ ಅವರು ಮಾತನಾಡಿ, ಭಾರತೀಯ ಜನತಾ ಪಕ್ಷದ ಚುನಾವಣಾ ಭರವಸೆಯೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಕ್ಯಾಂಟೀನ್‌ನಲ್ಲಿ ದಿನಕ್ಕೆ ಸುಮಾರು ೫೦೦ ಜನರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆಯಿದೆ. ಈ ಮೂಲಕ ಒಟ್ಟಾರೆಯಾಗಿ ದಿನಕ್ಕೆ ಸುಮಾರು ಒಂದು ಲಕ್ಷ ಜನರಿಗೆ ಊಟ ಒದಗಿಸಲಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಈ ಕ್ಯಾಂಟೀನ್‌ಗಳಲ್ಲಿ ರೊಟಿ, ದಾಲ್, ತರಕಾರಿ, ಅನ್ನ ಮತ್ತು ಉಪ್ಪಿನಕಾಯಿ ಸೇರಿದಂತೆ ಪೋಷಕಾಂಶವುಳ್ಳ ಆಹಾರ ಲಭ್ಯವಿರುತ್ತದೆ. ಒಂದು ಊಟದ ವೆಚ್ಚ ಸುಮಾರು ೩೦ ರೂ. ಆಗಿದ್ದರೂ, ಸರ್ಕಾರದ ಸಬ್ಸಿಡಿಯಿಂದ ೫ ರೂ.ಗೆ ಒದಗಿಸಲಾಗುತ್ತಿದೆ. ಕ್ಯಾಂಟೀನ್‌ಗಳನ್ನು ಮುಖ್ಯವಾಗಿ ಪ್ರಮುಖ ಪ್ರದೇಶಗಳ ಸಮೀಪ ಸ್ಥಾಪಿಸಲಾಗಿದ್ದು, ದಿಲ್ಲಿ ಅರ್ಬನ್ ಶೆಲ್ಟರ್ ಇಂಪ್ರೂವ್‌ಮೆಂಟ್ ಬೋರ್ಡ್ ಇವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದೆ.
ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಆರಂಭವಾದ ಈ ಯೋಜನೆಯು ದಿಲ್ಲಿಯ ಬಡವರಿಗೆ ದೊಡ್ಡ ಆಸರೆಯಾಗಲಿದೆ. ಇದು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಡವರ ಕಡೆಗೆ ಇದ್ದ ಕಾಳಜಿಯನ್ನು ನೆನಪಿಸುತ್ತದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

7 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

8 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

8 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

8 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

8 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

9 hours ago