ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ೧೦೦ ಹೊಸ ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸಿದೆ.
ಈ ಕ್ಯಾಂಟೀನ್ಗಳಲ್ಲಿ ಕೇವಲ ೫ ರೂ.ಗೆ ಊಟ ಸಿಗಲಿದೆ. ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಲಾಜಪತ್ ನಗರದ ನೆಹರೂ ನಗರದಲ್ಲಿ ಮೊದಲ ಕ್ಯಾಂಟೀನ್ನ ಉದ್ಘಾಟನೆ ನೆರವೇರಿಸಿದರು.
ನಗರಾಭಿವೃದ್ಧಿ ಸಚಿವ ಆಶಿಷ್ ಸೂದ್ ಅವರು ಮಾತನಾಡಿ, ಭಾರತೀಯ ಜನತಾ ಪಕ್ಷದ ಚುನಾವಣಾ ಭರವಸೆಯೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಕ್ಯಾಂಟೀನ್ನಲ್ಲಿ ದಿನಕ್ಕೆ ಸುಮಾರು ೫೦೦ ಜನರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆಯಿದೆ. ಈ ಮೂಲಕ ಒಟ್ಟಾರೆಯಾಗಿ ದಿನಕ್ಕೆ ಸುಮಾರು ಒಂದು ಲಕ್ಷ ಜನರಿಗೆ ಊಟ ಒದಗಿಸಲಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ರೈತರ ನೆರವಿಗೆ ಕ್ರೆಡಲ್ನಿಂದ `ಪಿಎಂ ಕುಸುಮ್ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ
ಈ ಕ್ಯಾಂಟೀನ್ಗಳಲ್ಲಿ ರೊಟಿ, ದಾಲ್, ತರಕಾರಿ, ಅನ್ನ ಮತ್ತು ಉಪ್ಪಿನಕಾಯಿ ಸೇರಿದಂತೆ ಪೋಷಕಾಂಶವುಳ್ಳ ಆಹಾರ ಲಭ್ಯವಿರುತ್ತದೆ. ಒಂದು ಊಟದ ವೆಚ್ಚ ಸುಮಾರು ೩೦ ರೂ. ಆಗಿದ್ದರೂ, ಸರ್ಕಾರದ ಸಬ್ಸಿಡಿಯಿಂದ ೫ ರೂ.ಗೆ ಒದಗಿಸಲಾಗುತ್ತಿದೆ. ಕ್ಯಾಂಟೀನ್ಗಳನ್ನು ಮುಖ್ಯವಾಗಿ ಪ್ರಮುಖ ಪ್ರದೇಶಗಳ ಸಮೀಪ ಸ್ಥಾಪಿಸಲಾಗಿದ್ದು, ದಿಲ್ಲಿ ಅರ್ಬನ್ ಶೆಲ್ಟರ್ ಇಂಪ್ರೂವ್ಮೆಂಟ್ ಬೋರ್ಡ್ ಇವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದೆ.
ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಆರಂಭವಾದ ಈ ಯೋಜನೆಯು ದಿಲ್ಲಿಯ ಬಡವರಿಗೆ ದೊಡ್ಡ ಆಸರೆಯಾಗಲಿದೆ. ಇದು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಡವರ ಕಡೆಗೆ ಇದ್ದ ಕಾಳಜಿಯನ್ನು ನೆನಪಿಸುತ್ತದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…