ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ೧೦೦ ಹೊಸ ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸಿದೆ.
ಈ ಕ್ಯಾಂಟೀನ್ಗಳಲ್ಲಿ ಕೇವಲ ೫ ರೂ.ಗೆ ಊಟ ಸಿಗಲಿದೆ. ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಲಾಜಪತ್ ನಗರದ ನೆಹರೂ ನಗರದಲ್ಲಿ ಮೊದಲ ಕ್ಯಾಂಟೀನ್ನ ಉದ್ಘಾಟನೆ ನೆರವೇರಿಸಿದರು.
ನಗರಾಭಿವೃದ್ಧಿ ಸಚಿವ ಆಶಿಷ್ ಸೂದ್ ಅವರು ಮಾತನಾಡಿ, ಭಾರತೀಯ ಜನತಾ ಪಕ್ಷದ ಚುನಾವಣಾ ಭರವಸೆಯೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಕ್ಯಾಂಟೀನ್ನಲ್ಲಿ ದಿನಕ್ಕೆ ಸುಮಾರು ೫೦೦ ಜನರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆಯಿದೆ. ಈ ಮೂಲಕ ಒಟ್ಟಾರೆಯಾಗಿ ದಿನಕ್ಕೆ ಸುಮಾರು ಒಂದು ಲಕ್ಷ ಜನರಿಗೆ ಊಟ ಒದಗಿಸಲಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ರೈತರ ನೆರವಿಗೆ ಕ್ರೆಡಲ್ನಿಂದ `ಪಿಎಂ ಕುಸುಮ್ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ
ಈ ಕ್ಯಾಂಟೀನ್ಗಳಲ್ಲಿ ರೊಟಿ, ದಾಲ್, ತರಕಾರಿ, ಅನ್ನ ಮತ್ತು ಉಪ್ಪಿನಕಾಯಿ ಸೇರಿದಂತೆ ಪೋಷಕಾಂಶವುಳ್ಳ ಆಹಾರ ಲಭ್ಯವಿರುತ್ತದೆ. ಒಂದು ಊಟದ ವೆಚ್ಚ ಸುಮಾರು ೩೦ ರೂ. ಆಗಿದ್ದರೂ, ಸರ್ಕಾರದ ಸಬ್ಸಿಡಿಯಿಂದ ೫ ರೂ.ಗೆ ಒದಗಿಸಲಾಗುತ್ತಿದೆ. ಕ್ಯಾಂಟೀನ್ಗಳನ್ನು ಮುಖ್ಯವಾಗಿ ಪ್ರಮುಖ ಪ್ರದೇಶಗಳ ಸಮೀಪ ಸ್ಥಾಪಿಸಲಾಗಿದ್ದು, ದಿಲ್ಲಿ ಅರ್ಬನ್ ಶೆಲ್ಟರ್ ಇಂಪ್ರೂವ್ಮೆಂಟ್ ಬೋರ್ಡ್ ಇವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದೆ.
ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಆರಂಭವಾದ ಈ ಯೋಜನೆಯು ದಿಲ್ಲಿಯ ಬಡವರಿಗೆ ದೊಡ್ಡ ಆಸರೆಯಾಗಲಿದೆ. ಇದು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಡವರ ಕಡೆಗೆ ಇದ್ದ ಕಾಳಜಿಯನ್ನು ನೆನಪಿಸುತ್ತದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ತಿಳಿಸಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…