ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ೧೦೦ ಹೊಸ ಅಟಲ್ ಕ್ಯಾಂಟೀನ್ಗಳನ್ನು ಆರಂಭಿಸಿದೆ.
ಈ ಕ್ಯಾಂಟೀನ್ಗಳಲ್ಲಿ ಕೇವಲ ೫ ರೂ.ಗೆ ಊಟ ಸಿಗಲಿದೆ. ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಲಾಜಪತ್ ನಗರದ ನೆಹರೂ ನಗರದಲ್ಲಿ ಮೊದಲ ಕ್ಯಾಂಟೀನ್ನ ಉದ್ಘಾಟನೆ ನೆರವೇರಿಸಿದರು.
ನಗರಾಭಿವೃದ್ಧಿ ಸಚಿವ ಆಶಿಷ್ ಸೂದ್ ಅವರು ಮಾತನಾಡಿ, ಭಾರತೀಯ ಜನತಾ ಪಕ್ಷದ ಚುನಾವಣಾ ಭರವಸೆಯೊಂದಿಗೆ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಕ್ಯಾಂಟೀನ್ನಲ್ಲಿ ದಿನಕ್ಕೆ ಸುಮಾರು ೫೦೦ ಜನರಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆಯಿದೆ. ಈ ಮೂಲಕ ಒಟ್ಟಾರೆಯಾಗಿ ದಿನಕ್ಕೆ ಸುಮಾರು ಒಂದು ಲಕ್ಷ ಜನರಿಗೆ ಊಟ ಒದಗಿಸಲಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ರೈತರ ನೆರವಿಗೆ ಕ್ರೆಡಲ್ನಿಂದ `ಪಿಎಂ ಕುಸುಮ್ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ
ಈ ಕ್ಯಾಂಟೀನ್ಗಳಲ್ಲಿ ರೊಟಿ, ದಾಲ್, ತರಕಾರಿ, ಅನ್ನ ಮತ್ತು ಉಪ್ಪಿನಕಾಯಿ ಸೇರಿದಂತೆ ಪೋಷಕಾಂಶವುಳ್ಳ ಆಹಾರ ಲಭ್ಯವಿರುತ್ತದೆ. ಒಂದು ಊಟದ ವೆಚ್ಚ ಸುಮಾರು ೩೦ ರೂ. ಆಗಿದ್ದರೂ, ಸರ್ಕಾರದ ಸಬ್ಸಿಡಿಯಿಂದ ೫ ರೂ.ಗೆ ಒದಗಿಸಲಾಗುತ್ತಿದೆ. ಕ್ಯಾಂಟೀನ್ಗಳನ್ನು ಮುಖ್ಯವಾಗಿ ಪ್ರಮುಖ ಪ್ರದೇಶಗಳ ಸಮೀಪ ಸ್ಥಾಪಿಸಲಾಗಿದ್ದು, ದಿಲ್ಲಿ ಅರ್ಬನ್ ಶೆಲ್ಟರ್ ಇಂಪ್ರೂವ್ಮೆಂಟ್ ಬೋರ್ಡ್ ಇವುಗಳ ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದೆ.
ಯಾರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಆರಂಭವಾದ ಈ ಯೋಜನೆಯು ದಿಲ್ಲಿಯ ಬಡವರಿಗೆ ದೊಡ್ಡ ಆಸರೆಯಾಗಲಿದೆ. ಇದು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಡವರ ಕಡೆಗೆ ಇದ್ದ ಕಾಳಜಿಯನ್ನು ನೆನಪಿಸುತ್ತದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ತಿಳಿಸಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…