ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದ್ದು, ಚುನಾವಣಾ ಆಯೋಗ ಹಾಗೂ ದೆಹಲಿ ಪೊಲೀಸ್ ಇಲಾಖೆ ಪಕ್ಷಪಾತಿ ಧೋರಣೆ ತೋರುತ್ತಿದೆ ಎಂದು ದೆಹಲಿ ಸಿಎಂ ಅತಿಶಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು(ಫೆಬ್ರವರಿ.4) ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘನೆಯ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರ ರಾಜಧಾನಿಯಾಗಿರುವ ದೆಹಲಿಯಲ್ಲಿ ಬಿಜೆಪಿ ಪಕ್ಷದ ನಾಯಕರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದೆ. ಆದರೆ ಕೇಸರಿ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸ್ ರಕ್ಷಣೆ ನೀಡುತ್ತಿದೆ. ಅಲ್ಲದೇ ಚುನಾವಣಾ ಆಯೋಗವು ದೂರು ನೀಡುವವರ ವಿರುದ್ಧವೇ ಪ್ರಕರಣಗಳನ್ನಿ ದಾಖಲಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಅವರ ವಿರುದ್ಧ ಮಾತ್ರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆದರೆ ದೆಹಲಿಯ ಜನತೆ ಇವೆಲ್ಲವನ್ನು ಗಮನಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯವರಿಗೆ ನಾಳೆ(ಫೆ.5) ನಡೆಯುವ ಚುನಾವಣೆಯಲ್ಲಿ ತಕ್ಕ ಉತ್ತರವನ್ನೇ ನೀಡಲಿದ್ದಾರೆ ಎಂದು ಹೇಳಿದರು.
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…
ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್…
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…