ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದ್ದು, ಚುನಾವಣಾ ಆಯೋಗ ಹಾಗೂ ದೆಹಲಿ ಪೊಲೀಸ್ ಇಲಾಖೆ ಪಕ್ಷಪಾತಿ ಧೋರಣೆ ತೋರುತ್ತಿದೆ ಎಂದು ದೆಹಲಿ ಸಿಎಂ ಅತಿಶಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು(ಫೆಬ್ರವರಿ.4) ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘನೆಯ ಆರೋಪದ ಮೇಲೆ ತಮ್ಮ ವಿರುದ್ಧ ಎಫ್ಐಆರ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರ ರಾಜಧಾನಿಯಾಗಿರುವ ದೆಹಲಿಯಲ್ಲಿ ಬಿಜೆಪಿ ಪಕ್ಷದ ನಾಯಕರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದೆ. ಆದರೆ ಕೇಸರಿ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸ್ ರಕ್ಷಣೆ ನೀಡುತ್ತಿದೆ. ಅಲ್ಲದೇ ಚುನಾವಣಾ ಆಯೋಗವು ದೂರು ನೀಡುವವರ ವಿರುದ್ಧವೇ ಪ್ರಕರಣಗಳನ್ನಿ ದಾಖಲಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಅವರ ವಿರುದ್ಧ ಮಾತ್ರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆದರೆ ದೆಹಲಿಯ ಜನತೆ ಇವೆಲ್ಲವನ್ನು ಗಮನಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯವರಿಗೆ ನಾಳೆ(ಫೆ.5) ನಡೆಯುವ ಚುನಾವಣೆಯಲ್ಲಿ ತಕ್ಕ ಉತ್ತರವನ್ನೇ ನೀಡಲಿದ್ದಾರೆ ಎಂದು ಹೇಳಿದರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…