ದೇಶ- ವಿದೇಶ

ದೆಹಲಿ ಚುನಾವಣೆ| ಚುನಾವಣಾ ಆಯೋಗದಿಂದ ಪಕ್ಷಪಾತಿ ಧೋರಣೆ: ಅತಿಶಿ ಆರೋಪ

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದ್ದು, ಚುನಾವಣಾ ಆಯೋಗ ಹಾಗೂ ದೆಹಲಿ ಪೊಲೀಸ್‌ ಇಲಾಖೆ ಪಕ್ಷಪಾತಿ ಧೋರಣೆ ತೋರುತ್ತಿದೆ ಎಂದು ದೆಹಲಿ ಸಿಎಂ ಅತಿಶಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಇಂದು(ಫೆಬ್ರವರಿ.4) ಮಾದರಿ ನೀತಿ ಸಂಹಿತೆ(ಎಂಸಿಸಿ) ಉಲ್ಲಂಘನೆಯ ಆರೋಪದ ಮೇಲೆ ತಮ್ಮ ವಿರುದ್ಧ ಎಫ್‌ಐಆರ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಷ್ಟ್ರ ರಾಜಧಾನಿಯಾಗಿರುವ ದೆಹಲಿಯಲ್ಲಿ ಬಿಜೆಪಿ ಪಕ್ಷದ ನಾಯಕರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದೆ. ಆದರೆ ಕೇಸರಿ ಪಕ್ಷದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ದೆಹಲಿ ಪೊಲೀಸ್‌ ರಕ್ಷಣೆ ನೀಡುತ್ತಿದೆ. ಅಲ್ಲದೇ ಚುನಾವಣಾ ಆಯೋಗವು ದೂರು ನೀಡುವವರ ವಿರುದ್ಧವೇ ಪ್ರಕರಣಗಳನ್ನಿ ದಾಖಲಿಸುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧುರಿ ಅವರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಅವರ ವಿರುದ್ಧ ಮಾತ್ರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆದರೆ ದೆಹಲಿಯ ಜನತೆ ಇವೆಲ್ಲವನ್ನು ಗಮನಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯವರಿಗೆ ನಾಳೆ(ಫೆ.5) ನಡೆಯುವ ಚುನಾವಣೆಯಲ್ಲಿ ತಕ್ಕ ಉತ್ತರವನ್ನೇ ನೀಡಲಿದ್ದಾರೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

57 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

1 hour ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago