ಹೊಸದಿಲ್ಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ದೆಹಲಿಯ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಪ್ರಶ್ನೆ ಮೂಡಿತ್ತು. ಆದರೆ, ಇದೀಗ ಈ ವಿಚಾರವಾಗಿ ಎಎಪಿ ಶಾಸಕಾಂಗದಿಂದ ತೆರೆ ಬಿದ್ದಿದ್ದು, ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ದೆಹಲಿಯ ಸಿಎಂ ಹುದ್ದೆಗಾಗಿ ಎಎಪಿ ಶಾಸಕರ ನಡುವೆ ರೇಸ್ ಶುರುವಾಗಿತ್ತು. ಈ ರೇಸ್ನಲ್ಲಿ ಕಲ್ಕಾಜಿ ಕ್ಷೇತ್ರದ ಶಾಸಕಿ ಅತಿಶಿ ಅವರು ಮುಂಚೂಣಿಯಲ್ಲಿದ್ದರು. ಪ್ರಸ್ತುತ PWD ಶಿಕ್ಷಣ ಸಚಿವೆಯಾಗಿರುವ ಅತಿಶಿಯವರು ಕೇಜ್ರಿವಾಲ್ ಜೈಲಿನಲ್ಲಿದ್ದ ಸಂದರ್ಭದಲ್ಲಿ ಸರ್ಕಾರವನ್ನು ಮುನ್ನೆಡೆಸಿದ್ದರು. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರು, ಎಎಪಿ ಶಾಸಕಾಂಗದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಅಂತಿಮವಾಗಿ 43 ವರ್ಷದ ಅತಿಶಿ ಅವರು ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ಸುಷ್ಮಾ ಸ್ವರಾಜ್ ಹಾಗೂ ಶೀಲಾ ದೀಕ್ಷಿತ್ ನಂತರ ಅತಿಶಿ ಅವರು ದೆಹಲಿ ಸಿಎಂ ಹುದ್ದೆಗೆ ಏರಿದ 3ನೇ ಮುಖ್ಯಮಂತ್ರಿಯಾಗಿದ್ದಾರೆ.
ಅರವಿಂದ್ ಕೇಜ್ರಿವಾಲ್ ರಾಜೀನಾಮೆ
ದೆಹಲಿಯಲ್ಲಿ ಪ್ರಸ್ತುತ ಎಎಪಿ ಪಕ್ಷದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಸಂಜೆ ಅಧಿಕೃತ ರಾಜೀನಾಮೆ ನೀಡಲಿದ್ದಾರೆ. ಕೇಜ್ರಿವಾಲ್ ರಾಜೀನಾಮೆ ಬಳಿಕ ಅತಿಶಿ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…