ಹೊಸದಿಲ್ಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ದೆಹಲಿಯ ಮುಖ್ಯಮಂತ್ರಿ ಯಾರಾಗುತ್ತಾರೆಂಬ ಪ್ರಶ್ನೆ ಮೂಡಿತ್ತು. ಆದರೆ, ಇದೀಗ ಈ ವಿಚಾರವಾಗಿ ಎಎಪಿ ಶಾಸಕಾಂಗದಿಂದ ತೆರೆ ಬಿದ್ದಿದ್ದು, ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆಯಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ದೆಹಲಿಯ ಸಿಎಂ ಹುದ್ದೆಗಾಗಿ ಎಎಪಿ ಶಾಸಕರ ನಡುವೆ ರೇಸ್ ಶುರುವಾಗಿತ್ತು. ಈ ರೇಸ್ನಲ್ಲಿ ಕಲ್ಕಾಜಿ ಕ್ಷೇತ್ರದ ಶಾಸಕಿ ಅತಿಶಿ ಅವರು ಮುಂಚೂಣಿಯಲ್ಲಿದ್ದರು. ಪ್ರಸ್ತುತ PWD ಶಿಕ್ಷಣ ಸಚಿವೆಯಾಗಿರುವ ಅತಿಶಿಯವರು ಕೇಜ್ರಿವಾಲ್ ಜೈಲಿನಲ್ಲಿದ್ದ ಸಂದರ್ಭದಲ್ಲಿ ಸರ್ಕಾರವನ್ನು ಮುನ್ನೆಡೆಸಿದ್ದರು. ಹೀಗಾಗಿ ಅರವಿಂದ್ ಕೇಜ್ರಿವಾಲ್ ಅವರು, ಎಎಪಿ ಶಾಸಕಾಂಗದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಅಂತಿಮವಾಗಿ 43 ವರ್ಷದ ಅತಿಶಿ ಅವರು ದೆಹಲಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ಸುಷ್ಮಾ ಸ್ವರಾಜ್ ಹಾಗೂ ಶೀಲಾ ದೀಕ್ಷಿತ್ ನಂತರ ಅತಿಶಿ ಅವರು ದೆಹಲಿ ಸಿಎಂ ಹುದ್ದೆಗೆ ಏರಿದ 3ನೇ ಮುಖ್ಯಮಂತ್ರಿಯಾಗಿದ್ದಾರೆ.
ಅರವಿಂದ್ ಕೇಜ್ರಿವಾಲ್ ರಾಜೀನಾಮೆ
ದೆಹಲಿಯಲ್ಲಿ ಪ್ರಸ್ತುತ ಎಎಪಿ ಪಕ್ಷದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಸಂಜೆ ಅಧಿಕೃತ ರಾಜೀನಾಮೆ ನೀಡಲಿದ್ದಾರೆ. ಕೇಜ್ರಿವಾಲ್ ರಾಜೀನಾಮೆ ಬಳಿಕ ಅತಿಶಿ ಅವರು ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…