ದೇಶ- ವಿದೇಶ

ಮಧ್ಯಪ್ರದೇಶ| ನಿಗೂಢ ಪ್ರಾಣಿಯಿಂದ ದಾಳಿ: ಆರು ಮಂದಿ ಸಾವು

ಬರ್ವಾನಿ: ಮಧ್ಯ ಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕೊಂದು ಹಾಕಿದೆ.

ನಿಗೂಢ ಪ್ರಾಣಿಯಿಂದ ಕಡಿತಕ್ಕೊಳಗಾದವರಿಗೆ ರೇಬಿಸ್ ಚುಚ್ಚುಮದ್ದನ್ನು ಚುಚ್ಚಲಾಯಿತು. ಆದರೂ ಯಾರೂ ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.

ಲಿಂಬೈ ಗ್ರಾಮದ 17 ಮಂದಿ ಮಲಗಿದ್ದರು, ಜನರು ಮಲಗಿದ್ದಾಗ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ ನಡೆಸಿದೆ. ಒಬ್ಬರು ಅಂಗಳ ಗುಡಿಸುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದೆ. ಬದುಕುಳಿದವರು ಆ ಪ್ರಾಣಿ ನಾಯಿಯಂತೆ ಕಾಣುತ್ತಿತ್ತು ಎಂದು ಹೇಳಿದ್ದಾರೆ.

ಬೊಗಳಲಿಲ್ಲ, ಗುರುಗುಟ್ಟಲೂ ಇಲ್ಲ ನೆರಳಿನಂತೆ ಬಂದು ಕಚ್ಚಿ ಕಣ್ಮರೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಎಲ್ಲಾ 17 ಮಂದಿಗೆ ಬರ್ವಾನಿ ಮತ್ತು ಇಂದೋರ್‍ನ ವೈದ್ಯಕೀಯ ಕೇಂದ್ರಗಳಲ್ಲಿ ರೇಬೀಸ್ ವಿರೋಧಿ ಲಸಿಕೆ ನೀಡಲಾಯಿತು. ಆದರೆ ಮೇ.23 ಮತ್ತು ಜೂನ್.2ರ ನಡುವೆ ಅವರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯರು ಮತ್ತು 40 ರಿಂದ 60 ವರ್ಷ ವಯಸ್ಸಿನ ನಾಲ್ವರು ಪುರುಷರಾಗಿದ್ದಾರೆ.

ವೈದ್ಯರು ಹಿಂದೆಂದೂ ಈ ರೀತಿ ಕಚ್ಚಿರುವ ಗುರುತನ್ನು ನೋಡಿಯೇ ಇಲ್ಲ ಎಂದಿದ್ದಾರೆ. ಎಲ್ಲಾ ವೈದ್ಯಕೀಯ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಮತ್ತು ಲಸಿಕೆಯನ್ನು ಮಾರ್ಗಸೂಚಿಗಳ ಪ್ರಕಾರ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೃತರ ಮೆದುಳಿನ ಅಂಗಾಂಶ, ಗಂಟಲಿನ ಬಯಾಪ್ಸಿಯನ್ನು ವಿವರವಾದ ವಿಶ್ಲೇಷಣೆಗಾಗಿ ದೆಹಲಿಗೆ ಕಳುಹಿಸಲಾಗಿದೆ. ಅವರೆಲ್ಲರ ಸಾವಿಗೆ ರೇಬಿಸ್ ಚುಚ್ಚುಮದ್ದು ಕಾರಣವೇ ಅಥವಾ ಆ ಪ್ರಾಣಿ ಕಚ್ಚಿದ್ದು ಕಾರಣವೇ ಎಂಬುದು ತಿಳಿದುಬರಲಿದೆ. ಅರಣ್ಯ ಇಲಾಖೆಯು ಪ್ರಾಣಿಗಾಗಿ ನಡೆಸಿದ ಹುಡುಕಾಟದಲ್ಲಿ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಯಾವುದೇ ಹೆಜ್ಜೆಗುರುತುಗಳು, ದೃಶ್ಯಗಳು, ಭೌತಿಕ ಸುಳಿವುಗಳು ಇಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮದಿಂದ ಕಾಡು ಕೇವಲ 4.5 ಕಿ.ಮೀ ದೂರದಲ್ಲಿದೆ. ನೀವು ರಸ್ತೆಯಲ್ಲಿ ವಾಹನ ಚಲಾಯಿಸುವ ಮೂಲಕ ಅಂತಹ ಪ್ರಾಣಿಯನ್ನು ಹಿಡಿಯಲು ಸಾಧ್ಯವಿಲ್ಲ. ಡ್ರೋನ್‍ಗಳನ್ನು ಬಳಸಿ, ತಂಡಗಳ ಸಂಖ್ಯೆಯನ್ನು ಹೆಚ್ಚಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago