ದೇಶ- ವಿದೇಶ

ಸಂಸತ್‌ ಭವನದ ಮೇಲೆ ದಾಳಿ: ಹುತಾತ್ಮರಾದ ಯೋಧರಿಗೆ ಮೋದಿ ಸೇರಿದಂತೆ ಗಣ್ಯರಿಂದ ಪುಷ್ಪ ನಮನ

ನವದೆಹಲಿ: 2001ರಲ್ಲಿ ಹಳೆ ಸಂಸತ್‌ ಮೇಲೆ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆ ದಾಳಿ ನಡೆಸಿ, 23 ವರ್ಷಗಳು ಕಳೆದಿದ್ದು, ದಾಳಿ ವೇಳೆ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದ್ದಾರೆ.

ಹಳೆ ಸಂಸತ್‌ ಭವನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಸುಮಾರು 23 ವರ್ಷಗಳು ಕಳೆದಿವೆ. ಈ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು(ಡಿ.13) ಹಳೆ ಸಂಸತ್‌ ಭವನ ಹೊರಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಪುಷ್ಪ ನಮನ ಮಾಡಿದ್ದಾರೆ.

ಈ ವೇಳೆ ಲೋಕಸಭೆಯ ಸಭಾಪತಿ ಓಂ ಬಿರ್ಲಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಸೇರಿದಂತೆ ಕೇಂದ್ರ ಸಚಿವರು ಮತ್ತು ಸಂಸದರು ಭಾಗವಹಿಸಿದ್ದರು. ಬಳಿಕ ಕೆಲ ಕಾಲ ಮೌನ ಆಚರಣೆ ಮಾಡಿ ಸಿಐಎಸ್‌ಎಫ್‌ ಸಿಬ್ಬಂದಿಯಿಂದ ಗೌರವ ಸಲ್ಲಿಸಲಾಯಿತು.

ಇನ್ನು ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, 2001ರಲ್ಲಿ ಸಂಸತ್ತಿನ ಮೇಲೆ ದಾಳಿ ನಡೆಯಿತು. ಆ ದಾಳಿಯಲ್ಲಿ ಯೋಧರು ತಮ್ಮ ಪ್ರಾಣವನ್ನು ತ್ಯಾಗಮಾಡಿ ಸಚಿವರು ಹಾಗೂ ಸಂಸದರನ್ನು ರಕ್ಷಣೆ ಮಾಡಿದ್ದಾರೆ. ಅವರ ಆ ತ್ಯಾಗ ನಮ್ಮ ರಾಷ್ಟ್ರಪ್ರೇಮವನ್ನು ಸದಾ ನೆನಪಿಸುತ್ತದೆ. ಹೀಗಾಗಿ ನಾವು ಅವರ ಧೈರ್ಯ ಹಾಗೂ ಸಮರ್ಪಣೆಗಾಗಿ ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

4 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

9 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

9 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

9 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

10 hours ago