ದೇಶ- ವಿದೇಶ

ಸಮಾಜದಲ್ಲಿ ಕೆಲವರಿಂದ ಶಾಂತಿ ಕದಡುವ ಯತ್ನ: ಪ್ರಧಾನಿ ನರೇಂದ್ರ ಮೋದಿ ಕಿಡಿ

ನವದೆಹಲಿ: ಜಾತಿ ರಾಜಕಾರಣದ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ

ಇಂದು ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, 2047ರ ವೇಳೆಗೆ ವಿಕಸಿತ ಭಾರತ ಕನಸನ್ನು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಗ್ರಾಮಗಳೇ ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಅವರು, ದೇಶದಲ್ಲಿ ಜಾತಿ ರಾಜಕಾರಣದ ವಿಷವನ್ನು ಹರಡುವ ಮೂಲಕ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ. ಗ್ರಾಮಗಳಲ್ಲಿ ಶಾಂತಿ ಸೌಹಾರ್ದತೆಯ ಪರಂಪರೆಯನ್ನು ಬಲಪಡಿಸುವ ಕೆಲಸ ಮಾಡಬೇಕಿದೆ. ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು ಇಂತಹ ಕೃತ್ಯಗಳನ್ನು ವಿಫಲಗೊಳಿಸುವಂತೆ ಕರೆ ನೀಡಿದರು.

ಕಳೆದ 2014ರಿಂದ ನಮ್ಮ ಸರ್ಕಾರವು ಗ್ರಾಮೀಣಾಭಿವೃದ್ಧಿಗಾಗಿ ಹಲವು ಕ್ರಮ ಕೈಗೊಂಡಿದೆ. ಈ ಬಗ್ಗೆ ನನಗೆ ಬಹಳ ಹೆಮ್ಮೆಯಿದೆ. ಗ್ರಾಮೀಣ ಭಾರತದಲ್ಲಿ ಬಡತನವು 2012ರಲ್ಲಿ ಶೇಕಡಾ 26ರಿಂದ ಈಗ ಶೇಕಡಾ 5ಕ್ಕಿಂತ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದರು.

ಮೂಲಭೂತ ಅವಶ್ಯಕತೆಗಳಿಂದ ವಂಚಿತವಾಗಿರುವ ಗ್ರಾಮಗಳನ್ನು ಬಿಟ್ಟುಹೋದ ಹಿಂದಿನ ಸರ್ಕಾರಕ್ಕಿಂತ ಭಿನ್ನವಾಗಿ ಇಂದಿನ ನಮ್ಮ ಸರ್ಕಾರವು ಈಗ ಹಳ್ಳಿಗಳನ್ನು ಸಬಲೀಕರಣಗೊಳಿಸಲು ಮತ್ತು ಆರಂಭದಲ್ಲಿ ಕಡೆಗಣಿಸಲ್ಟಟ್ಟವರ ಅಗತ್ಯಗಳನ್ನು ಪರಿಹರಿಸಲು ಗಮನಹರಿಸಿದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago