ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್ ಮನೆ ತಲುಪಿದ್ದು ಹೇಗೆ? ದಾಳಿ ಹಿಂದೆ ಬೇರೆ ಯಾರಾದ್ದಾರೂ ಕೈವಾಡ ಇದೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಯು ಗುರುವಾರ ನಸುಕಿನ ಜಾವ ಸೈಫ್ ಮನೆಗೆ ನುಗ್ಗಿ, ಸೈಫ್ ಕಿರಿಯ ಪುತ್ರನ ಕೊಠಡಿಗೆ ತೆರಳಿ, ಒಂದು ಕೋಟಿ ಹಣ ನೀಡದಿದ್ದರೆ ಮಗುವನ್ನು ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ. ಈ ವೇಳೆ ಕೂಗಾಟ ಕೇಳಿ ಕೊಠಡಿಗೆ ಬಂದ ಸೈಫ್ ಮಗನ ರಕ್ಷಣೆಗೆ ಮುಂದಾಗಿದ್ದು, ಆವಾಗ ಆರೋಪಿ ಸೈಫ್ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದ. ಘಟನೆಯಲ್ಲಿ ಸೈಫ್ ಅಲಿಖಾನ್ ಅವರು ಗಂಭೀರವಾಗಿ ಗಾಯಗೊಂಡಿದ್ದರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂಬೈನ ಪೊಲೀಸರು ಘಟನೆಯ ಬಗ್ಗೆ ತಿಳಿದು, ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಆರೋಪಿಯ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಫೋಟೊವನ್ನು ಬಿಡುಗಡೆ ಮಾಡಿದ್ದರು. ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…