ಶ್ರೀನಗರ : ಜಮ್ಮು ಮತ್ತು ಕಾಶ್ಮಿರದ ಅಖ್ನೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದು, ಸೇನೆ ನಡೆಸಿದ ಕಾರ್ಯಾಚಾರಣೆಯಲ್ಲಿ ಮೂವರು ಉಗ್ರರನ್ನು ಸೆದೆಬಡಿಯಲಾಗಿದೆ.
ಹುತಾತ್ಮ ಸೇನಾಧಿಕಾರಿಯನ್ನು ಕುಲದೀಪ್ ಚಂದ್ ಎಂದು ಗುರ್ತಿಸಲಾಗಿದೆ. ಇನ್ನು ಹತರಾದ ಉಗ್ರರ ಪೈಕಿ ಓರ್ವ ಜೈಶ್-ಎ-ಮೊಹಮ್ಮದ್ನ ಕಮಾಂಡರ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಈತ ಹಲವಾರು ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದನು. ಸೈಫುಲ್ಲಾ ಜೈಶ್-ಎ-ಮೊಹಮ್ಮದ್ನ ಕಮಾಂಡರ್ ಆಗಿದ್ದು, ಕಿಶ್ತ್ವಾರ್ ಪ್ರದೇಶದಲ್ಲಿ ಈತ ಉಗ್ರ ಸಂಘಟನೆಯನ್ನು ಮುನ್ನಡೆಸುತ್ತಿದ್ದ, ಈತನ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ತಿಳಿದು ಕಾರ್ಯಾಚರಣೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಿಶ್ತ್ವಾರ್ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿತ್ತು.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…