ಶ್ರೀನಗರ : ಜಮ್ಮು ಮತ್ತು ಕಾಶ್ಮಿರದ ಅಖ್ನೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದು, ಸೇನೆ ನಡೆಸಿದ ಕಾರ್ಯಾಚಾರಣೆಯಲ್ಲಿ ಮೂವರು ಉಗ್ರರನ್ನು ಸೆದೆಬಡಿಯಲಾಗಿದೆ.
ಹುತಾತ್ಮ ಸೇನಾಧಿಕಾರಿಯನ್ನು ಕುಲದೀಪ್ ಚಂದ್ ಎಂದು ಗುರ್ತಿಸಲಾಗಿದೆ. ಇನ್ನು ಹತರಾದ ಉಗ್ರರ ಪೈಕಿ ಓರ್ವ ಜೈಶ್-ಎ-ಮೊಹಮ್ಮದ್ನ ಕಮಾಂಡರ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಈತ ಹಲವಾರು ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದನು. ಸೈಫುಲ್ಲಾ ಜೈಶ್-ಎ-ಮೊಹಮ್ಮದ್ನ ಕಮಾಂಡರ್ ಆಗಿದ್ದು, ಕಿಶ್ತ್ವಾರ್ ಪ್ರದೇಶದಲ್ಲಿ ಈತ ಉಗ್ರ ಸಂಘಟನೆಯನ್ನು ಮುನ್ನಡೆಸುತ್ತಿದ್ದ, ಈತನ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ತಿಳಿದು ಕಾರ್ಯಾಚರಣೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಿಶ್ತ್ವಾರ್ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿತ್ತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…