ಸಮಸ್ತಿಪುರ(ಬಿಹಾರ): ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ತಂದೆ ಪ್ರವೀಣ್ ಕುಮಾರ್ ಶಪಥ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಡಿಸೆಂಬರ್ 9 ರಂದು ಅತುಲ್ ಸುಭಾಷ್(34) ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುಂಚೆ 90 ನಿಮಿಷಗಳ ವಿಡಿಯೋ ಹಾಗೂ ಸುದೀರ್ಘವಾದ ಆತ್ಮಹತ್ಯೆಗೆ ಸಂಬಂಧಿಸಿದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ನನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದರು.
ನನ್ನ ಮಗನ ಸಾವಿಗೆ ಕಾರಣರಾದವರನ್ನು ಬಂಧಿಸಿದ್ದಕ್ಕೆ ಕರ್ನಾಟಕ ರಾಜ್ಯ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಆದರೆ ನನ್ನ ಮಗನಿಗೆ ಕಿರಕುಳ ನೀಡಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ನನ್ನ ಮಗನ ಆತ್ಮಕ್ಕೆ ಶಾಂತಿಯಾಗುತ್ತೆ. ಬದುಕಿದ್ದಾಗಲೂ ನನ್ನ ಮಗ ದಿನೇ ದಿನೇ ಸಾಯುತ್ತಿದ್ದನು. ಇಷ್ಟೆಲ್ಲಾ ಚಿತ್ರಹಿಂಸೆ ಅನುಭವಿಸುತ್ತಿದ್ದರೂ ಕೂಡ ನನ್ನ ಮಗ ಯಾರಲ್ಲಿಯೂ ಹೇಳಿಕೊಂಡಿರಲಿಲ್ಲ. ತನ್ನ ಮಗನನ್ನು ತಮಗೆ ಒಪ್ಪಿಸಬೇಕೆಂದು ಆತ್ಮಹತ್ಯೆ ಪತ್ರದಲ್ಲಿ ಆತ ಸ್ಪಷ್ಟವಾಗಿ ಹೇಳಿದ್ದಾನೆ. ಹೀಗಾಗಿ ನ್ಯಾಯ ಸಿಗುವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…