ಸಮಸ್ತಿಪುರ(ಬಿಹಾರ): ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ತಂದೆ ಪ್ರವೀಣ್ ಕುಮಾರ್ ಶಪಥ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಡಿಸೆಂಬರ್ 9 ರಂದು ಅತುಲ್ ಸುಭಾಷ್(34) ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುಂಚೆ 90 ನಿಮಿಷಗಳ ವಿಡಿಯೋ ಹಾಗೂ ಸುದೀರ್ಘವಾದ ಆತ್ಮಹತ್ಯೆಗೆ ಸಂಬಂಧಿಸಿದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ನನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದರು.
ನನ್ನ ಮಗನ ಸಾವಿಗೆ ಕಾರಣರಾದವರನ್ನು ಬಂಧಿಸಿದ್ದಕ್ಕೆ ಕರ್ನಾಟಕ ರಾಜ್ಯ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಆದರೆ ನನ್ನ ಮಗನಿಗೆ ಕಿರಕುಳ ನೀಡಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ನನ್ನ ಮಗನ ಆತ್ಮಕ್ಕೆ ಶಾಂತಿಯಾಗುತ್ತೆ. ಬದುಕಿದ್ದಾಗಲೂ ನನ್ನ ಮಗ ದಿನೇ ದಿನೇ ಸಾಯುತ್ತಿದ್ದನು. ಇಷ್ಟೆಲ್ಲಾ ಚಿತ್ರಹಿಂಸೆ ಅನುಭವಿಸುತ್ತಿದ್ದರೂ ಕೂಡ ನನ್ನ ಮಗ ಯಾರಲ್ಲಿಯೂ ಹೇಳಿಕೊಂಡಿರಲಿಲ್ಲ. ತನ್ನ ಮಗನನ್ನು ತಮಗೆ ಒಪ್ಪಿಸಬೇಕೆಂದು ಆತ್ಮಹತ್ಯೆ ಪತ್ರದಲ್ಲಿ ಆತ ಸ್ಪಷ್ಟವಾಗಿ ಹೇಳಿದ್ದಾನೆ. ಹೀಗಾಗಿ ನ್ಯಾಯ ಸಿಗುವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…