ದೇಶ- ವಿದೇಶ

ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ: ತಂದೆ ಪ್ರವೀಣ್‌ ಕುಮಾರ್‌ ಶಪಥ

ಸಮಸ್ತಿಪುರ(ಬಿಹಾರ): ಟೆಕ್ಕಿ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರದಲ್ಲಿ ನ್ಯಾಯ ಸಿಗುವವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ತಂದೆ ಪ್ರವೀಣ್‌ ಕುಮಾರ್‌ ಶಪಥ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಡಿಸೆಂಬರ್‌ 9 ರಂದು ಅತುಲ್‌ ಸುಭಾಷ್‌(34) ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುಂಚೆ 90 ನಿಮಿಷಗಳ ವಿಡಿಯೋ ಹಾಗೂ ಸುದೀರ್ಘವಾದ ಆತ್ಮಹತ್ಯೆಗೆ ಸಂಬಂಧಿಸಿದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಅಲ್ಲದೇ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ನನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದರು.

ನನ್ನ ಮಗನ ಸಾವಿಗೆ ಕಾರಣರಾದವರನ್ನು ಬಂಧಿಸಿದ್ದಕ್ಕೆ ಕರ್ನಾಟಕ ರಾಜ್ಯ ಪೊಲೀಸರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಆದರೆ ನನ್ನ ಮಗನಿಗೆ ಕಿರಕುಳ ನೀಡಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ನನ್ನ ಮಗನ ಆತ್ಮಕ್ಕೆ ಶಾಂತಿಯಾಗುತ್ತೆ. ಬದುಕಿದ್ದಾಗಲೂ ನನ್ನ ಮಗ ದಿನೇ ದಿನೇ ಸಾಯುತ್ತಿದ್ದನು. ಇಷ್ಟೆಲ್ಲಾ ಚಿತ್ರಹಿಂಸೆ ಅನುಭವಿಸುತ್ತಿದ್ದರೂ ಕೂಡ ನನ್ನ ಮಗ ಯಾರಲ್ಲಿಯೂ ಹೇಳಿಕೊಂಡಿರಲಿಲ್ಲ. ತನ್ನ ಮಗನನ್ನು ತಮಗೆ ಒಪ್ಪಿಸಬೇಕೆಂದು ಆತ್ಮಹತ್ಯೆ ಪತ್ರದಲ್ಲಿ ಆತ ಸ್ಪಷ್ಟವಾಗಿ ಹೇಳಿದ್ದಾನೆ. ಹೀಗಾಗಿ ನ್ಯಾಯ ಸಿಗುವರೆಗೂ ನನ್ನ ಮಗನ ಅಸ್ಥಿಯನ್ನು ವಿಸರ್ಜನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

2 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

3 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

12 hours ago