ದೇಶ- ವಿದೇಶ

2 ದಿನ ಇರಲ್ಲ ಅಯೋಧ್ಯೆ ಶ್ರೀರಾಮನ ದರ್ಶನ: ಕಾರಣ ಇಷ್ಟೆ.!

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಧ್ವಜಾರೋಹಣ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್.‌24ರ ಸಂಜೆಯಿಂದ ಎರಡು ದಿನಗಳ ಕಾಲ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.

ನವೆಂಬರ್.‌25ರಂದು ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ.

ಇದನ್ನು ಓದಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ 25 ಅಡಿ ಎತ್ತರದ ರಾವಣನ ಪ್ರತಿಮೆ

ಈ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಾಣ ಪ್ರತಿಷ್ಠೆಗೆ ದೇಶದಾದ್ಯಂತ ಜನರನ್ನು ಆಹ್ವಾನಿಸಲಾಗಿದ್ದರೂ ಈ ಬಾರಿ ಧ್ವಜಾರೋಹಣ ಸಮಾರಂಭಕ್ಕೆ ಪೂರ್ವ ಉತ್ತರ ಪ್ರದೇಶಕ್ಕೆ ಆದ್ಯತೆ ನೀಡಲಾಗಿದೆ. ದೇವಾಲಯ ಸಂಕೀರ್ಣದ ಒಳಗೆ ನಿರ್ಮಾಣ ಕಾರ್ಯಗಳು ಇನ್ನೂ ನಡೆಯುತ್ತಿದ್ದು, ಆಸನ ಸಾಮರ್ಥ್ಯವನ್ನು ಕಡಿಮೆ ಮಾಡಲಾಗಿದೆ.

ಆದ್ದರಿಂದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಹ್ವಾನಿತರ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

28 mins ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

34 mins ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

4 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

4 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago