ದೇಶ- ವಿದೇಶ

ಅಮಿತ್‌ ಶಾರವರ ಆತ್ಮವಿಶ್ವಾಸದ ಛಲ ನನ್ನ ಪಕ್ಷದ ಪ್ರೇರಣೆಗೆ ಶಕ್ತಿ: ವಿಜಯೇಂದ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್‌ ಶಾ
ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಬುಧವಾರ(ಜ.1) ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

ಇದೇ ವೇಳೆ ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು ಎಂದು ಹೇಳಿದ್ದಾರೆ.

ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಅಮಿತ್ ಶಾ ರವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹ ತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago