ದೇಶ- ವಿದೇಶ

ಅಮಿತ್‌ ಶಾರವರ ಆತ್ಮವಿಶ್ವಾಸದ ಛಲ ನನ್ನ ಪಕ್ಷದ ಪ್ರೇರಣೆಗೆ ಶಕ್ತಿ: ವಿಜಯೇಂದ್ರ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಕ್ಷ ಸಂಘಟನೆಗಾಗಿಯೂ ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆಯೇ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್‌ ಶಾ
ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಬುಧವಾರ(ಜ.1) ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

ಇದೇ ವೇಳೆ ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿ ಸೂಕ್ತ ಮಾರ್ಗದರ್ಶನವನ್ನು ಕೋರಲಾಯಿತು ಎಂದು ಹೇಳಿದ್ದಾರೆ.

ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಅಮಿತ್ ಶಾ ರವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ. ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹ ತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

15 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago