ನವದೆಹಲಿ: ಕೆಲ ಕಾರಣಗಳಿಂದ ಬೆಂಗಳೂರು ಟು ಮೈಸೂರು ಬಿಜೆಪಿ ಪಾದಯಾತ್ರೆಗೆ ಬೆಂಬಲ ಇಲ್ಲ ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ.
ಈ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಆಗಸ್ಟ್.3ರಿಂದ ಪಾದಯಾತ್ರೆ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸಲಿದ್ದಾರೆ.
ದೆಹಲಿಯಲ್ಲಿ ಇಂದು ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮನವೊಲಿಸುವಲ್ಲಿ ನಾಯಕರು ಯಶಸ್ವಿಯಾಗಿದ್ದಾರೆ.
ಈ ಮೊದಲು ಪಾದಯಾತ್ರೆ ಪಾಲಿಟಿಕ್ಸ್ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಭಿನ್ನಮತ ಉಂಟಾಗಿತ್ತು. ಪಾದಯಾತ್ರೆಗೆ ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ಸೂಚಿಸಿರಲಿಲ್ಲ. ಈಗ ಪಾದಯಾತ್ರೆಗೆ ಎಚ್ಡಿಕೆ ಒಪ್ಪಿಗೆ ಸೂಚಿಸಿದ್ದು, ಜೆಡಿಎಸ್-ಬಿಜೆಪಿಯಿಂದ ಪಾದಯಾತ್ರೆ ಫಿಕ್ಸ್ ಆಗಿದೆ.
ಈ ಬಗ್ಗೆ ದೆಹಲಿಯಲ್ಲಿಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಸ್ತುವಾರಿ ರಾಧಾಮೋಹನ್ ದಾಸ್, ಬಿ.ವೈ.ವಿಜಯೇಂದ್ರ ಜಂಟಿ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಶನಿವಾರ ಬೆಂಗಳೂರಿನಿಂದ ಪಾದಯಾತ್ರೆ ಕೈಗೊಂಡಿದ್ದೇವೆ. ಈ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೇ ಚಾಲನೆ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…