ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.
ಶೇಖ್ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ ಅರಸಿ ಭಾರತಕ್ಕೆ ಬಂದಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವ ಪ್ರತಿಭಟನಾಕಾರರು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು. ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಹಿಂಸಾಚಾರದಿಂದ ಮೊಬೈಲ್ ಇಂಟರ್ನೆಟ್ ಕಡಿತಗೊಳಿಸಲಾಗಿದೆ ಮತ್ತು ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪ್ತಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…