ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.
ಶೇಖ್ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ ಅರಸಿ ಭಾರತಕ್ಕೆ ಬಂದಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವ ಪ್ರತಿಭಟನಾಕಾರರು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು. ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಹಿಂಸಾಚಾರದಿಂದ ಮೊಬೈಲ್ ಇಂಟರ್ನೆಟ್ ಕಡಿತಗೊಳಿಸಲಾಗಿದೆ ಮತ್ತು ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪ್ತಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…