ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.
ಶೇಖ್ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ ಅರಸಿ ಭಾರತಕ್ಕೆ ಬಂದಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವ ಪ್ರತಿಭಟನಾಕಾರರು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು. ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಹಿಂಸಾಚಾರದಿಂದ ಮೊಬೈಲ್ ಇಂಟರ್ನೆಟ್ ಕಡಿತಗೊಳಿಸಲಾಗಿದೆ ಮತ್ತು ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪ್ತಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…