ದೇಶ- ವಿದೇಶ

ಭುಗಿಲೆದ್ದ ಬಾಂಗ್ಲಾದೇಶ ಪ್ರತಿಭಟನೆ: ರಾಜೀನಾಮೆ ನೀಡಿ ದೇಶ ತೊರದೆ ಪ್ರಧಾನಿ ಶೇಖ್‌ ಹಸೀನಾ

ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.

ಶೇಖ್‌ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ ಅರಸಿ ಭಾರತಕ್ಕೆ ಬಂದಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವ ಪ್ರತಿಭಟನಾಕಾರರು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು. ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಹಿಂಸಾಚಾರದಿಂದ ಮೊಬೈಲ್‌ ಇಂಟರ್ನೆಟ್‌ ಕಡಿತಗೊಳಿಸಲಾಗಿದೆ ಮತ್ತು ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪ್ತಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

1 hour ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

1 hour ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

1 hour ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

2 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

2 hours ago