ದೇಶ- ವಿದೇಶ

ಭುಗಿಲೆದ್ದ ಬಾಂಗ್ಲಾದೇಶ ಪ್ರತಿಭಟನೆ: ರಾಜೀನಾಮೆ ನೀಡಿ ದೇಶ ತೊರದೆ ಪ್ರಧಾನಿ ಶೇಖ್‌ ಹಸೀನಾ

ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.

ಶೇಖ್‌ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ ಅರಸಿ ಭಾರತಕ್ಕೆ ಬಂದಿಳಿಸಿದ್ದಾರೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಆಡಳಿತರೂಢ ಅವಾಮಿ ಲೀಗ್‌ ಪಕ್ಷದ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವ ಪ್ರತಿಭಟನಾಕಾರರು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು. ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಹಿಂಸಾಚಾರದಿಂದ ಮೊಬೈಲ್‌ ಇಂಟರ್ನೆಟ್‌ ಕಡಿತಗೊಳಿಸಲಾಗಿದೆ ಮತ್ತು ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪ್ತಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

37 mins ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

1 hour ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

5 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

19 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

20 hours ago