ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂದು ವರದಿಯಾಗಿದೆ.
ಶೇಖ್ ಹಸೀನಾ ಅವರು ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದು, ಅವರು ಆಶ್ರಯ ಅರಸಿ ಭಾರತಕ್ಕೆ ಬಂದಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಆಡಳಿತರೂಢ ಅವಾಮಿ ಲೀಗ್ ಪಕ್ಷದ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದು, ಸುಮಾರು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಹಸೀನಾ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿ ನಡೆಸುತ್ತಿರುವ ಪ್ರತಿಭಟನಾಕಾರರು ಹಾಗೂ ಆಡಳಿತ ಪಕ್ಷದ ಕಾರ್ಯಕರ್ತರಿಂದ ಭಾನುವಾರ ಬೆಳಿಗ್ಗೆ ಪ್ರತಿರೋಧ ಎದುರಾದಾಗ ಘರ್ಷಣೆ ಉಂಟಾಗಿತ್ತು. ದೇಶದ 13 ಜಿಲ್ಲೆಗಳಲ್ಲಿ ಘರ್ಷಣೆ ಉಂಟಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಹಿಂಸಾಚಾರದಿಂದ ಮೊಬೈಲ್ ಇಂಟರ್ನೆಟ್ ಕಡಿತಗೊಳಿಸಲಾಗಿದೆ ಮತ್ತು ಅನಿರ್ದಿಷ್ಟ ಅವಧಿಗೆ ರಾಷ್ಟ್ರವ್ಯಾಪ್ತಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…