ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿರುವ ಶೇಖ್ ಹಸೀನಾ ಅವರು, ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ವಿದ್ಯಮಾನಗಳಿಗೆ ಅಮೆರಿಕಾ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಮೆರಿಕಾದವರು ಬಾಂಗ್ಲಾದೇಶದಲ್ಲಿ ಅಧಿಕಾರ ಕಿತ್ತುಕೊಳ್ಳಲು ಬಯಸಿದ್ದರು. ಹೀಗಾಗಿ ವಿದ್ಯಾರ್ಥಿಗಳೆಲ್ಲಾ ಮೀಸಲಾತಿ ಹೆಸರಲ್ಲಿ ಹಿಂಸಾತ್ಮಕ ಹೋರಾಟ ನಡೆಸುತ್ತಿದ್ದಾರೆ. ನಾನು ರಾಜೀನಾಮೆ ನೀಡಲ್ಲ ಎಂದು ಪದೇ ಪದೇ ಹೇಳುತ್ತಿದ್ದೆ. ಆದರೆ ಹಿಂಸಾಚಾರ ನಿಲ್ಲದ ಪರಿಣಾಮ ನಾನು ಶಾಂತಿ ಕಾಪಾಡಲೆಂದು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ಅಮೆರಿಕಾ ಬಂಗಾಳಕೊಲ್ಲಿಯಲ್ಲಿ ತನ್ನ ಅಸ್ತಿತ್ವ ಸ್ಥಾಪನೆ ಮಾಡಲು ಬಯಸಿತ್ತು. ನಾನು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಅಮೆರಿಕಾ ತನ್ನ ಬೇಳೆ ಬೇಯಿಸಿಕೊಂಡಿದೆ. ನನ್ನ ದೇಶದ ಜನರು ಮೂಲಭೂತವಾದಿಗಳ ಸಂಚಿಗೆ ಬಲಿಯಾಗಬಾರದು ಎಂದು ಬಯಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ದೇಶವನ್ನು ಅಸ್ಥಿರಗೊಳಿಸಲು ಮುಗ್ಧ ಜನರನ್ನು ಬಳಸಿಕೊಂಡು ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಮಾತಿನುದ್ದಕ್ಕೂ ಅಮೆರಿಕಾದ ಮೇಲೆ ಗಂಭೀರ ಆರೋಪ ಮಾಡಿದರು.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…