ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿರುವ ಶೇಖ್ ಹಸೀನಾ ಅವರು, ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ವಿದ್ಯಮಾನಗಳಿಗೆ ಅಮೆರಿಕಾ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಮೆರಿಕಾದವರು ಬಾಂಗ್ಲಾದೇಶದಲ್ಲಿ ಅಧಿಕಾರ ಕಿತ್ತುಕೊಳ್ಳಲು ಬಯಸಿದ್ದರು. ಹೀಗಾಗಿ ವಿದ್ಯಾರ್ಥಿಗಳೆಲ್ಲಾ ಮೀಸಲಾತಿ ಹೆಸರಲ್ಲಿ ಹಿಂಸಾತ್ಮಕ ಹೋರಾಟ ನಡೆಸುತ್ತಿದ್ದಾರೆ. ನಾನು ರಾಜೀನಾಮೆ ನೀಡಲ್ಲ ಎಂದು ಪದೇ ಪದೇ ಹೇಳುತ್ತಿದ್ದೆ. ಆದರೆ ಹಿಂಸಾಚಾರ ನಿಲ್ಲದ ಪರಿಣಾಮ ನಾನು ಶಾಂತಿ ಕಾಪಾಡಲೆಂದು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ಅಮೆರಿಕಾ ಬಂಗಾಳಕೊಲ್ಲಿಯಲ್ಲಿ ತನ್ನ ಅಸ್ತಿತ್ವ ಸ್ಥಾಪನೆ ಮಾಡಲು ಬಯಸಿತ್ತು. ನಾನು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಅಮೆರಿಕಾ ತನ್ನ ಬೇಳೆ ಬೇಯಿಸಿಕೊಂಡಿದೆ. ನನ್ನ ದೇಶದ ಜನರು ಮೂಲಭೂತವಾದಿಗಳ ಸಂಚಿಗೆ ಬಲಿಯಾಗಬಾರದು ಎಂದು ಬಯಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ದೇಶವನ್ನು ಅಸ್ಥಿರಗೊಳಿಸಲು ಮುಗ್ಧ ಜನರನ್ನು ಬಳಸಿಕೊಂಡು ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಮಾತಿನುದ್ದಕ್ಕೂ ಅಮೆರಿಕಾದ ಮೇಲೆ ಗಂಭೀರ ಆರೋಪ ಮಾಡಿದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…