ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿರುವ ಶೇಖ್ ಹಸೀನಾ ಅವರು, ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ವಿದ್ಯಮಾನಗಳಿಗೆ ಅಮೆರಿಕಾ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಮೆರಿಕಾದವರು ಬಾಂಗ್ಲಾದೇಶದಲ್ಲಿ ಅಧಿಕಾರ ಕಿತ್ತುಕೊಳ್ಳಲು ಬಯಸಿದ್ದರು. ಹೀಗಾಗಿ ವಿದ್ಯಾರ್ಥಿಗಳೆಲ್ಲಾ ಮೀಸಲಾತಿ ಹೆಸರಲ್ಲಿ ಹಿಂಸಾತ್ಮಕ ಹೋರಾಟ ನಡೆಸುತ್ತಿದ್ದಾರೆ. ನಾನು ರಾಜೀನಾಮೆ ನೀಡಲ್ಲ ಎಂದು ಪದೇ ಪದೇ ಹೇಳುತ್ತಿದ್ದೆ. ಆದರೆ ಹಿಂಸಾಚಾರ ನಿಲ್ಲದ ಪರಿಣಾಮ ನಾನು ಶಾಂತಿ ಕಾಪಾಡಲೆಂದು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ಅಮೆರಿಕಾ ಬಂಗಾಳಕೊಲ್ಲಿಯಲ್ಲಿ ತನ್ನ ಅಸ್ತಿತ್ವ ಸ್ಥಾಪನೆ ಮಾಡಲು ಬಯಸಿತ್ತು. ನಾನು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಅಮೆರಿಕಾ ತನ್ನ ಬೇಳೆ ಬೇಯಿಸಿಕೊಂಡಿದೆ. ನನ್ನ ದೇಶದ ಜನರು ಮೂಲಭೂತವಾದಿಗಳ ಸಂಚಿಗೆ ಬಲಿಯಾಗಬಾರದು ಎಂದು ಬಯಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ದೇಶವನ್ನು ಅಸ್ಥಿರಗೊಳಿಸಲು ಮುಗ್ಧ ಜನರನ್ನು ಬಳಸಿಕೊಂಡು ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಮಾತಿನುದ್ದಕ್ಕೂ ಅಮೆರಿಕಾದ ಮೇಲೆ ಗಂಭೀರ ಆರೋಪ ಮಾಡಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…