ನವದೆಹಲಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಅಮೆರಿಕಾ ಕಾರಣ ಎಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಗಂಭೀರ ಆರೋಪ ಮಾಡಿದ್ದಾರೆ.
ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಆಗಮಿಸಿರುವ ಶೇಖ್ ಹಸೀನಾ ಅವರು, ಮೊದಲ ಬಾರಿಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆದ ರಾಜಕೀಯ ವಿದ್ಯಮಾನಗಳಿಗೆ ಅಮೆರಿಕಾ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅಮೆರಿಕಾದವರು ಬಾಂಗ್ಲಾದೇಶದಲ್ಲಿ ಅಧಿಕಾರ ಕಿತ್ತುಕೊಳ್ಳಲು ಬಯಸಿದ್ದರು. ಹೀಗಾಗಿ ವಿದ್ಯಾರ್ಥಿಗಳೆಲ್ಲಾ ಮೀಸಲಾತಿ ಹೆಸರಲ್ಲಿ ಹಿಂಸಾತ್ಮಕ ಹೋರಾಟ ನಡೆಸುತ್ತಿದ್ದಾರೆ. ನಾನು ರಾಜೀನಾಮೆ ನೀಡಲ್ಲ ಎಂದು ಪದೇ ಪದೇ ಹೇಳುತ್ತಿದ್ದೆ. ಆದರೆ ಹಿಂಸಾಚಾರ ನಿಲ್ಲದ ಪರಿಣಾಮ ನಾನು ಶಾಂತಿ ಕಾಪಾಡಲೆಂದು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.
ಅಮೆರಿಕಾ ಬಂಗಾಳಕೊಲ್ಲಿಯಲ್ಲಿ ತನ್ನ ಅಸ್ತಿತ್ವ ಸ್ಥಾಪನೆ ಮಾಡಲು ಬಯಸಿತ್ತು. ನಾನು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಅಮೆರಿಕಾ ತನ್ನ ಬೇಳೆ ಬೇಯಿಸಿಕೊಂಡಿದೆ. ನನ್ನ ದೇಶದ ಜನರು ಮೂಲಭೂತವಾದಿಗಳ ಸಂಚಿಗೆ ಬಲಿಯಾಗಬಾರದು ಎಂದು ಬಯಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ದೇಶವನ್ನು ಅಸ್ಥಿರಗೊಳಿಸಲು ಮುಗ್ಧ ಜನರನ್ನು ಬಳಸಿಕೊಂಡು ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಮಾತಿನುದ್ದಕ್ಕೂ ಅಮೆರಿಕಾದ ಮೇಲೆ ಗಂಭೀರ ಆರೋಪ ಮಾಡಿದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…