ದೇಶ- ವಿದೇಶ

ಹನಿಟ್ರ್ಯಾಪ್‌ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ: ಸಂಸದ ಬಸವರಾಜ ಬೊಮ್ಮಾಯಿ

ನವದೆಹಲಿ: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್.‌21) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಹಗರಣ ಮತ್ತು ಹನಿಟ್ರ್ಯಾಪ್‌ಗೆ ಕುಖ್ಯಾತಿ ಪಡೆದಿದೆ. ಇದರಿಂದ ಕರ್ನಾಟಕದ ಗೌರವವನ್ನು ಕಡಿಮೆ ಮಾಡಿದೆ ಎಂದು ಬಹಳ ಸೂಕ್ಷ್ಮವಾಗಿ ಹೇಳುತ್ತಿದ್ದೇನೆ. ಕಾಂಗ್ರೆಸ್‌ ಸರ್ಕಾರ ತನ್ನ ಅಧಿಕಾರದಿಂದ ರಾಜ್ಯದ ಲಾಲಸ್ಯ ನೈತಿಕತೆಯನ್ನು ಅಧೋಗತಿಗೆ ತೆಗೆದುಕೊಂಡಿದೆ. ಒಂದು ಹಗರಣದಿಂದ ಇನ್ನೊಂದು ಹಗರಣ ಆಗುತ್ತಿದೆ. ಒಟ್ಟಾರೆ ಎರಡು ವರ್ಷದಲ್ಲಿ ಹತ್ತು ಹಗರಣಗಳು ಹೊರಗೆ ಬಂದಿವೆ. ಅಲ್ಲದೇ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಕೈ ಹಾಕಿದ ಕಡೆಯಲ್ಲ ಹಗರಣ ಹೊರ ಬರುತ್ತಿವೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆಯಲ್ಲಿ ನೈತಿಕತೆ ಅಧಿಪತನವಾಗಿದ್ದು, ಮೊದಲು ಮನಿ ಕ್ರೈಸಿಸ್‌ನಿಂದ ಕೂಡಿತ್ತು. ಆದರೆ ಇದೀಗ ಹನಿಟ್ರ್ಯಾಪ್‌ ಕ್ರೈಸಿಸ್‌ ಆರಂಭವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿ ಮತ್ತು ನೈತಿಕವಾಗಿ ದಿವಾಳಿಯಾಗಿದೆ. ಅಲ್ಲದೇ ಕ್ಯಾಬಿನೆಟ್ ಸಚಿವರು ಹನಿಟ್ರ್ಯಾಪ್‌ಆಗುತ್ತಿದೆ ಎಂದು ಹೇಳುವ ಪರಿಸ್ಥಿತಿ ಬಂದಿದೆ. ಹದಿನೈದು ದಿನದಿಂದ ವಿಧಾನಸೌಧದ ಮೊಗಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇಂತಹ ಕ್ಯಾಬಿನೆಟ್‌ಗೆ ಏನು ಹೇಳಬೇಕು. ಇದೊಂದು ನೈತಿಕತೆ ಕಳೆದುಕೊಂಡ ಕ್ರಿಮಿನಲ್ ಕ್ಯಾಬಿನೆಟ್. ಸಿಎಂ ಸಿದ್ದರಾಮಯ್ಯನವರು ನೈತಕತೆ ಹೊತ್ತು ತಮ್ಮ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಸಚಿವ ಕೆ.ಎನ್‌.ರಾಜಣ್ಣ ಅವರು ಒಟ್ಟು 48 ಜನರ ಸಿಡಿ ಇದೆ ಎಂದಿದ್ದಾರೆ. ಅವರಗೆ ಮಾಹಿತಿ ಇದ್ದರೆ ಅವರು ಯಾರ ಯಾರದ್ದೂ ಎಂಬುದರ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಬೇಕು. ಜೊತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದ ತನಿಖೆಯಾಗಬೇಕು. ಇದನ್ನು ಯಾರೇ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಈಗ ಎಸ್‌ಐಟಿಗಳಿಗೆ ಮಹತ್ವವಿಲ್ಲ. ಹೀಗಾಗಿ ನಿವೃತ್ತ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಅರ್ಚನ ಎಸ್‌ ಎಸ್

Recent Posts

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

16 mins ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

34 mins ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

50 mins ago

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

6 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

6 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

6 hours ago