ದೇಶ- ವಿದೇಶ

ಹನಿಟ್ರ್ಯಾಪ್‌ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ: ಸಂಸದ ಬಸವರಾಜ ಬೊಮ್ಮಾಯಿ

ನವದೆಹಲಿ: ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್.‌21) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಹಗರಣ ಮತ್ತು ಹನಿಟ್ರ್ಯಾಪ್‌ಗೆ ಕುಖ್ಯಾತಿ ಪಡೆದಿದೆ. ಇದರಿಂದ ಕರ್ನಾಟಕದ ಗೌರವವನ್ನು ಕಡಿಮೆ ಮಾಡಿದೆ ಎಂದು ಬಹಳ ಸೂಕ್ಷ್ಮವಾಗಿ ಹೇಳುತ್ತಿದ್ದೇನೆ. ಕಾಂಗ್ರೆಸ್‌ ಸರ್ಕಾರ ತನ್ನ ಅಧಿಕಾರದಿಂದ ರಾಜ್ಯದ ಲಾಲಸ್ಯ ನೈತಿಕತೆಯನ್ನು ಅಧೋಗತಿಗೆ ತೆಗೆದುಕೊಂಡಿದೆ. ಒಂದು ಹಗರಣದಿಂದ ಇನ್ನೊಂದು ಹಗರಣ ಆಗುತ್ತಿದೆ. ಒಟ್ಟಾರೆ ಎರಡು ವರ್ಷದಲ್ಲಿ ಹತ್ತು ಹಗರಣಗಳು ಹೊರಗೆ ಬಂದಿವೆ. ಅಲ್ಲದೇ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಕೈ ಹಾಕಿದ ಕಡೆಯಲ್ಲ ಹಗರಣ ಹೊರ ಬರುತ್ತಿವೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆಯಲ್ಲಿ ನೈತಿಕತೆ ಅಧಿಪತನವಾಗಿದ್ದು, ಮೊದಲು ಮನಿ ಕ್ರೈಸಿಸ್‌ನಿಂದ ಕೂಡಿತ್ತು. ಆದರೆ ಇದೀಗ ಹನಿಟ್ರ್ಯಾಪ್‌ ಕ್ರೈಸಿಸ್‌ ಆರಂಭವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿ ಮತ್ತು ನೈತಿಕವಾಗಿ ದಿವಾಳಿಯಾಗಿದೆ. ಅಲ್ಲದೇ ಕ್ಯಾಬಿನೆಟ್ ಸಚಿವರು ಹನಿಟ್ರ್ಯಾಪ್‌ಆಗುತ್ತಿದೆ ಎಂದು ಹೇಳುವ ಪರಿಸ್ಥಿತಿ ಬಂದಿದೆ. ಹದಿನೈದು ದಿನದಿಂದ ವಿಧಾನಸೌಧದ ಮೊಗಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇಂತಹ ಕ್ಯಾಬಿನೆಟ್‌ಗೆ ಏನು ಹೇಳಬೇಕು. ಇದೊಂದು ನೈತಿಕತೆ ಕಳೆದುಕೊಂಡ ಕ್ರಿಮಿನಲ್ ಕ್ಯಾಬಿನೆಟ್. ಸಿಎಂ ಸಿದ್ದರಾಮಯ್ಯನವರು ನೈತಕತೆ ಹೊತ್ತು ತಮ್ಮ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಸಚಿವ ಕೆ.ಎನ್‌.ರಾಜಣ್ಣ ಅವರು ಒಟ್ಟು 48 ಜನರ ಸಿಡಿ ಇದೆ ಎಂದಿದ್ದಾರೆ. ಅವರಗೆ ಮಾಹಿತಿ ಇದ್ದರೆ ಅವರು ಯಾರ ಯಾರದ್ದೂ ಎಂಬುದರ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಬೇಕು. ಜೊತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದ ತನಿಖೆಯಾಗಬೇಕು. ಇದನ್ನು ಯಾರೇ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಈಗ ಎಸ್‌ಐಟಿಗಳಿಗೆ ಮಹತ್ವವಿಲ್ಲ. ಹೀಗಾಗಿ ನಿವೃತ್ತ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಅರ್ಚನ ಎಸ್‌ ಎಸ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago