ನವದೆಹಲಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ನಾಟಕದ ಗೌರವವನ್ನು ಹಾಳು ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಮಾರ್ಚ್.21) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಹಗರಣ ಮತ್ತು ಹನಿಟ್ರ್ಯಾಪ್ಗೆ ಕುಖ್ಯಾತಿ ಪಡೆದಿದೆ. ಇದರಿಂದ ಕರ್ನಾಟಕದ ಗೌರವವನ್ನು ಕಡಿಮೆ ಮಾಡಿದೆ ಎಂದು ಬಹಳ ಸೂಕ್ಷ್ಮವಾಗಿ ಹೇಳುತ್ತಿದ್ದೇನೆ. ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರದಿಂದ ರಾಜ್ಯದ ಲಾಲಸ್ಯ ನೈತಿಕತೆಯನ್ನು ಅಧೋಗತಿಗೆ ತೆಗೆದುಕೊಂಡಿದೆ. ಒಂದು ಹಗರಣದಿಂದ ಇನ್ನೊಂದು ಹಗರಣ ಆಗುತ್ತಿದೆ. ಒಟ್ಟಾರೆ ಎರಡು ವರ್ಷದಲ್ಲಿ ಹತ್ತು ಹಗರಣಗಳು ಹೊರಗೆ ಬಂದಿವೆ. ಅಲ್ಲದೇ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಕೈ ಹಾಕಿದ ಕಡೆಯಲ್ಲ ಹಗರಣ ಹೊರ ಬರುತ್ತಿವೆ ಎಂದು ಹೇಳಿದರು.
ಕರ್ನಾಟಕ ವಿಧಾನಸಭೆಯಲ್ಲಿ ನೈತಿಕತೆ ಅಧಿಪತನವಾಗಿದ್ದು, ಮೊದಲು ಮನಿ ಕ್ರೈಸಿಸ್ನಿಂದ ಕೂಡಿತ್ತು. ಆದರೆ ಇದೀಗ ಹನಿಟ್ರ್ಯಾಪ್ ಕ್ರೈಸಿಸ್ ಆರಂಭವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿ ಮತ್ತು ನೈತಿಕವಾಗಿ ದಿವಾಳಿಯಾಗಿದೆ. ಅಲ್ಲದೇ ಕ್ಯಾಬಿನೆಟ್ ಸಚಿವರು ಹನಿಟ್ರ್ಯಾಪ್ಆಗುತ್ತಿದೆ ಎಂದು ಹೇಳುವ ಪರಿಸ್ಥಿತಿ ಬಂದಿದೆ. ಹದಿನೈದು ದಿನದಿಂದ ವಿಧಾನಸೌಧದ ಮೊಗಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಇಂತಹ ಕ್ಯಾಬಿನೆಟ್ಗೆ ಏನು ಹೇಳಬೇಕು. ಇದೊಂದು ನೈತಿಕತೆ ಕಳೆದುಕೊಂಡ ಕ್ರಿಮಿನಲ್ ಕ್ಯಾಬಿನೆಟ್. ಸಿಎಂ ಸಿದ್ದರಾಮಯ್ಯನವರು ನೈತಕತೆ ಹೊತ್ತು ತಮ್ಮ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ಸಚಿವ ಕೆ.ಎನ್.ರಾಜಣ್ಣ ಅವರು ಒಟ್ಟು 48 ಜನರ ಸಿಡಿ ಇದೆ ಎಂದಿದ್ದಾರೆ. ಅವರಗೆ ಮಾಹಿತಿ ಇದ್ದರೆ ಅವರು ಯಾರ ಯಾರದ್ದೂ ಎಂಬುದರ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಬೇಕು. ಜೊತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದ ತನಿಖೆಯಾಗಬೇಕು. ಇದನ್ನು ಯಾರೇ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಈಗ ಎಸ್ಐಟಿಗಳಿಗೆ ಮಹತ್ವವಿಲ್ಲ. ಹೀಗಾಗಿ ನಿವೃತ್ತ ಅಥವಾ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…