ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ಬಹಳ ಪ್ರಮುಖವಾದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಸಾಧ್ಯವಾಗುವುದಿಲ್ಲ. ನಮ್ಮ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯಿತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಿರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ. ಅಲ್ಲದೇ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರಲಿದ್ದು, ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯವಾಗಿದೆ. ನಮ್ಮ ದೇಶದ ಚುನಾವಣೆ ವ್ಯವಸ್ಥೆಯನ್ನು ಬಿಟ್ಟರೆ ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಹೀಗಾಗಿ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿರುವ ಕಾರಣ ಮೋದಿಯವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮವಾಗಿದೆ ಎಂದಿದ್ದಾರೆ.
ಈ ನಿರ್ಧಾರದಿಂದ ದೇಶಕ್ಕೆ ಒಳ್ಳೆಯದಾಗುವಂತಹ ಸೂಚನೆ ದೊರೆತಿದ್ದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚಿಸಿ ಸ್ವಾಗತ ಮಾಡಬೇಕು. ಅಲ್ಲದೇ ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…