ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ಬಹಳ ಪ್ರಮುಖವಾದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಸಾಧ್ಯವಾಗುವುದಿಲ್ಲ. ನಮ್ಮ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯಿತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಿರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ. ಅಲ್ಲದೇ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರಲಿದ್ದು, ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯವಾಗಿದೆ. ನಮ್ಮ ದೇಶದ ಚುನಾವಣೆ ವ್ಯವಸ್ಥೆಯನ್ನು ಬಿಟ್ಟರೆ ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಹೀಗಾಗಿ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿರುವ ಕಾರಣ ಮೋದಿಯವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮವಾಗಿದೆ ಎಂದಿದ್ದಾರೆ.
ಈ ನಿರ್ಧಾರದಿಂದ ದೇಶಕ್ಕೆ ಒಳ್ಳೆಯದಾಗುವಂತಹ ಸೂಚನೆ ದೊರೆತಿದ್ದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚಿಸಿ ಸ್ವಾಗತ ಮಾಡಬೇಕು. ಅಲ್ಲದೇ ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…