ದೇಶ- ವಿದೇಶ

ಒಂದು ದೇಶ, ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ

ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ಬಹಳ ಪ್ರಮುಖವಾದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಸಾಧ್ಯವಾಗುವುದಿಲ್ಲ. ನಮ್ಮ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯಿತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಿರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ. ಅಲ್ಲದೇ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರಲಿದ್ದು, ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯವಾಗಿದೆ. ನಮ್ಮ ದೇಶದ ಚುನಾವಣೆ ವ್ಯವಸ್ಥೆಯನ್ನು ಬಿಟ್ಟರೆ ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಹೀಗಾಗಿ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿರುವ ಕಾರಣ ಮೋದಿಯವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮವಾಗಿದೆ ಎಂದಿದ್ದಾರೆ.

ಈ ನಿರ್ಧಾರದಿಂದ ದೇಶಕ್ಕೆ ಒಳ್ಳೆಯದಾಗುವಂತಹ ಸೂಚನೆ ದೊರೆತಿದ್ದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚಿಸಿ ಸ್ವಾಗತ ಮಾಡಬೇಕು. ಅಲ್ಲದೇ ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

15 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago