ದೇಶ- ವಿದೇಶ

ಒಂದು ದೇಶ, ಒಂದು ಚುನಾವಣೆ ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು: ಬಸವರಾಜ ಬೊಮ್ಮಾಯಿ

ನವದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ಬಹಳ ಪ್ರಮುಖವಾದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಸಾಧ್ಯವಾಗುವುದಿಲ್ಲ. ನಮ್ಮ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯಿತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಿರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ. ಅಲ್ಲದೇ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರಲಿದ್ದು, ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯವಾಗಿದೆ. ನಮ್ಮ ದೇಶದ ಚುನಾವಣೆ ವ್ಯವಸ್ಥೆಯನ್ನು ಬಿಟ್ಟರೆ ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಹೀಗಾಗಿ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿರುವ ಕಾರಣ ಮೋದಿಯವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮವಾಗಿದೆ ಎಂದಿದ್ದಾರೆ.

ಈ ನಿರ್ಧಾರದಿಂದ ದೇಶಕ್ಕೆ ಒಳ್ಳೆಯದಾಗುವಂತಹ ಸೂಚನೆ ದೊರೆತಿದ್ದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚಿಸಿ ಸ್ವಾಗತ ಮಾಡಬೇಕು. ಅಲ್ಲದೇ ದೇಶದ ಎಲ್ಲ ಜನರೂ ಸ್ವಾಗತಿಸಬೇಕು. ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

18 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

30 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

1 hour ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago