pm narendra modi (1)
ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಎರಡು ಮೆಗಾ ಯೋಜನೆಗಳನ್ನು ಪರಿಶೀಲನೆ ನಡೆಸಿದರು.
ಇವು ಹಲವು ವರ್ಷಗಳಿಂದ ವಿಳಂಬವಾಗುತ್ತಿದ್ದು, ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಈ ಯೋಜನೆಗಳಲ್ಲಿ ತ್ವರಿತ ಪ್ರಗತಿ ಸಾಧಿಸುವಂತೆ ಪ್ರಧಾನಿ ಮೋದಿ ತಿಳಿಸಿದ್ದಾರೆ.
2025ರ ಡಿಸೆಂಬರ್.31ರಂದು ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ತೆಲಂಗಾಣದ ಜೆ ಚೊಕ್ಕಾ ರಾವ್ ದೇವದುಲ ಲಿಫ್ಟ್ ನೀರಾವರಿ ಯೋಜನೆಯನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಉಪನಗರ ರೈಲ್ವೆ ಯೋಜನೆಯು ನಾಲ್ಕು ದಶಕಗಳಿಂದ ಚರ್ಚೆಯಲ್ಲಿದೆ. ಅಂತಿಮವಾಗಿ ಇದನ್ನು 2020ರಲ್ಲಿ ಮಂಜೂರು ಮಾಡಲಾಯಿತು. 2023ರಲ್ಲಿ ಪೂರ್ಣಗೊಳ್ಳುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಇನ್ನೂ ಪೂರ್ಣಗೊಳ್ಳಲು ಸಾಧ್ಯವಾಗಿಲ್ಲ.
ಈ ಯೋಜನೆಯು ನಗರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ. ಈ ಯೋಜನೆಯು ನಗರ, ಉಪನಗರಗಳು ಮತ್ತು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ನಾಲ್ಕು ಕಾರಿಡಾರ್ಗಳಲ್ಲಿ ಸುಮಾರು 148 ಕಿ.ಮೀಗಳನ್ನು ವ್ಯಾಪಿಸಿದೆ.
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…