ದೇಶ- ವಿದೇಶ

ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬ: ವೇಗ ಹೆಚ್ಚಿಸುವಂತೆ ಪ್ರಧಾನಿ ಮೋದಿ ಕರೆ

ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಎರಡು ಮೆಗಾ ಯೋಜನೆಗಳನ್ನು ಪರಿಶೀಲನೆ ನಡೆಸಿದರು.

ಇವು ಹಲವು ವರ್ಷಗಳಿಂದ ವಿಳಂಬವಾಗುತ್ತಿದ್ದು, ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಈ ಯೋಜನೆಗಳಲ್ಲಿ ತ್ವರಿತ ಪ್ರಗತಿ ಸಾಧಿಸುವಂತೆ ಪ್ರಧಾನಿ ಮೋದಿ ತಿಳಿಸಿದ್ದಾರೆ.

2025ರ ಡಿಸೆಂಬರ್.‌31ರಂದು ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ತೆಲಂಗಾಣದ ಜೆ ಚೊಕ್ಕಾ ರಾವ್‌ ದೇವದುಲ ಲಿಫ್ಟ್‌ ನೀರಾವರಿ ಯೋಜನೆಯನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಉಪನಗರ ರೈಲ್ವೆ ಯೋಜನೆಯು ನಾಲ್ಕು ದಶಕಗಳಿಂದ ಚರ್ಚೆಯಲ್ಲಿದೆ. ಅಂತಿಮವಾಗಿ ಇದನ್ನು 2020ರಲ್ಲಿ ಮಂಜೂರು ಮಾಡಲಾಯಿತು. 2023ರಲ್ಲಿ ಪೂರ್ಣಗೊಳ್ಳುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಇನ್ನೂ ಪೂರ್ಣಗೊಳ್ಳಲು ಸಾಧ್ಯವಾಗಿಲ್ಲ.

ಈ ಯೋಜನೆಯು ನಗರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ. ಈ ಯೋಜನೆಯು ನಗರ, ಉಪನಗರಗಳು ಮತ್ತು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ನಾಲ್ಕು ಕಾರಿಡಾರ್‌ಗಳಲ್ಲಿ ಸುಮಾರು 148 ಕಿ.ಮೀಗಳನ್ನು ವ್ಯಾಪಿಸಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪಠ್ಯದಲ್ಲಿ ಪುನೀತ್ ಜೀವನಗಾಥೆ ಸೇರ್ಪಡೆ ಸಾಗತಾರ್ಹ

ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು…

54 mins ago

ಓದುಗರ ಪತ್ರ: ಚಾಮುಂಡಿ ಬೆಟ್ಟ ದೇಗುಲದ ಗೋಪುರಕ್ಕೆ ಧಕ್ಕೆ ತರಬೇಡಿ

ವಿಶ್ವ ವಿಖ್ಯಾತಿ ಹೊಂದಿರುವ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನಕ್ಕೆ ರಾಜ್ಯ, ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ,…

56 mins ago

ಓದುಗರ ಪತ್ರ: ಸರ್ಕಾರ ಪುಸ್ತಕ ಸಂಸ್ಕೃತಿ ಕೊಲ್ಲುವ ಧೋರಣೆ ಕೈಬಿಡಲಿ

ವರದಿಗಳ ಪ್ರಕಾರ ಸಾರ್ವಜನಿಕ ಗ್ರಂಥಾಲಯಗಳಲ್ಲಿ, ಕಳೆದ ನಾಲ್ಕು ವರ್ಷಗಳಿಂದ ಹೊಸ ಸಾಹಿತ್ಯ ಕೃತಿಗಳ ಖರೀದಿಯೇ ನಡೆದಿಲ್ಲ ಎಂಬುದು ಆತಂಕಕಾರಿ. ಸ್ಥಳೀಯ…

58 mins ago

ಬಿಳಿಗಿರಿ ರಂಗನಬೆಟ್ಟ: ಚಿಕ್ಕಜಾತ್ರೆಗೆ ಹರಿದು ಬಂದ ಭಕ್ತ ಸಾಗರ

ಸಾವಿರಾರು ಮಂದಿ ಭಕ್ತರು ಭಾಗಿ: ವಿವಿಧ ಸೇವೆಗಳನ್ನು ಸಲ್ಲಿಸಿದ ಭಕ್ತಾದಿಗಳು ಯಳಂದೂರು: ತಾಲ್ಲೂಕಿನ ಐತಿಹಾಸಿಕ ಪುರಾಣ ಪ್ರಸಿದ್ಧ ಬಿಳಿಗಿರಿರಂಗನ ಬೆಟ್ಟದಲ್ಲಿರುವ…

1 hour ago

ಚುಂಚನಕಟ್ಟೆಯಲ್ಲಿ ವೈಭವದ ಶ್ರೀರಾಮ ರಥೋತ್ಸವ

ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ಲಕ್ಷಾಂತರ ಜನರು; ಶಾಸಕರೂ ಸೇರಿದಂತೆ ಗಣ್ಯರು ಭಾಗಿ ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಶ್ರೀರಾಮದೇವರ ರಥೋತ್ಸವ…

1 hour ago

ಸುತ್ತೂರು ಜಾತ್ರೆ ಕೃಷಿ ಮೇಳ: ಕೃಷಿ ಉದ್ಯಮಿಗಳಾಗುವವರಿಗೆ ಮುಕ್ತ ವೇದಿಕೆ

ಎಸ್.ಎಸ್.ಭಟ್ ನಂಜನಗೂಡು: ತ್ರಿವಿಧ ದಾಸೋಹಕ್ಕೆ ಹೆಸರಾದ ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ…

1 hour ago