ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಅರ್ಧಕ್ಕೆ ಎದ್ದು ಬಂದಿದ್ದಾರೆ. ಸಭೆಯಲ್ಲಿ ಮೈಕ್ ಆಫ್ ಮಾಡುವ ಮೂಲಕ ಮಾತನಾಡದಂತೆ ತಡೆಹಿಡಿಯಲಾಯಿತು ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.
ಈ ಬಾರಿ ಮಂಡಿಸಿದ ಬಜೆಟ್ನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರವಿರುವ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಹಲವು ಪ್ರತಿಪಕ್ಷಗಳ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿರಲಿಲ್ಲ. ಆದರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡುವಾಗ ಮೈಕ್ ಆಫ್ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ಸಭೆಯಿಂದ ಎದ್ದು ಹೊರ ಬಂದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎಲ್ಲಾ ರಾಜ್ಯದ ಸಿಎಂಗಳಿಗೂ ಮಾತನಾಡಲು 20 ನಿಮಿಷ ನೀಡಲಾಯಿತು. ಆದರೆ ನಾನು ಕೇವಲ ಐದು ನಿಮಿಷಗಳ ನಂತರ ಮಾತನಾಡದಂತೆ ತಡೆಯಲಾಯಿತು ಎಂದು ಆರೋಪಿಸಿದರು. ಸಭೆಯಲ್ಲಿ ನನ್ನ ಮಾತನ್ನು ತಡೆದು ಬಂಗಾಳ ಮತ್ತು ಎಲ್ಲಾ ಪ್ರಾದೇಶಿಕ ಪಕ್ಷಗಳಿಗೆ ಅಪಮಾನ ಮಾಡಲಾಗಿದೆ. ಈ ಮೂಲಕ ತಾರತಮ್ಯ ಮಾಡುವುದು ಮತ್ತೆ ಸಾಬೀತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನೂ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆದಿದ್ದು, 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕಡೆಗೆ ಸಭೆಯಲ್ಲಿ ಒತ್ತು ನೀಡಲಾಯಿತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…