ದೇಶ- ವಿದೇಶ

ನೀತಿ ಆಯೋಗದ ಸಭೆಯಿಂದ ಅರ್ಧಕ್ಕೆ ಎದ್ದು ಬಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಅರ್ಧಕ್ಕೆ ಎದ್ದು ಬಂದಿದ್ದಾರೆ. ಸಭೆಯಲ್ಲಿ ಮೈಕ್‌ ಆಫ್‌ ಮಾಡುವ ಮೂಲಕ ಮಾತನಾಡದಂತೆ ತಡೆಹಿಡಿಯಲಾಯಿತು ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಾರಿ ಮಂಡಿಸಿದ ಬಜೆಟ್‌ನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರವಿರುವ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಹಲವು ಪ್ರತಿಪಕ್ಷಗಳ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿರಲಿಲ್ಲ. ಆದರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡುವಾಗ ಮೈಕ್‌ ಆಫ್‌ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ಸಭೆಯಿಂದ ಎದ್ದು ಹೊರ ಬಂದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಲ್ಲಾ ರಾಜ್ಯದ ಸಿಎಂಗಳಿಗೂ ಮಾತನಾಡಲು 20 ನಿಮಿಷ ನೀಡಲಾಯಿತು. ಆದರೆ ನಾನು ಕೇವಲ ಐದು ನಿಮಿಷಗಳ ನಂತರ ಮಾತನಾಡದಂತೆ ತಡೆಯಲಾಯಿತು ಎಂದು ಆರೋಪಿಸಿದರು. ಸಭೆಯಲ್ಲಿ ನನ್ನ ಮಾತನ್ನು ತಡೆದು ಬಂಗಾಳ ಮತ್ತು ಎಲ್ಲಾ ಪ್ರಾದೇಶಿಕ ಪಕ್ಷಗಳಿಗೆ ಅಪಮಾನ ಮಾಡಲಾಗಿದೆ. ಈ ಮೂಲಕ ತಾರತಮ್ಯ ಮಾಡುವುದು ಮತ್ತೆ ಸಾಬೀತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನೂ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆದಿದ್ದು, 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕಡೆಗೆ ಸಭೆಯಲ್ಲಿ ಒತ್ತು ನೀಡಲಾಯಿತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago