ದೇಶ- ವಿದೇಶ

ಇಂದು ಭಾರತ್‌ ಬಂದ್: ಹಲವು ಸಂಘಟನೆಗಳ ಬೆಂಬಲ

ನವದೆಹಲಿ: ಎಸ್‌ಸಿ, ಎಸ್‌ಟಿ ಒಳ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಖಂಡಿಸಿ ಹಾಗೂ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಇಂದು(ಆ.21)ಭಾರತ್‌ ಬಂದೆಗೆ ಕರೆ ನೀಡಿದೆ. ಈ ಬಂದ್‌ಗೆ ದೇಶದ ಹಲವು ಸಂಘಟನೆಗಳು ಬೆಂಬಲ ವ್ಯಕ್ತವಾಗಿದೆ.

ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಾಕ್ತವಾಗುವ ಸಾಧ್ಯತೆ ಇರುವುದರಿಂದ ಭದ್ರತೆ ಹೆಚ್ಚಿಸಲಾಗಿದೆ. ಉದ್ಯಮ ಸಂಸ್ಥೆಗಳು ಸಹ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಭಾರತ್ ಬಂದ್ ಗೆ‌ ಬೆಂಬಲ ನೀಡುತ್ತೀವೆ.

ದೇಶದ ಹಲವಾರು ಎಸ್‌ಸಿ ಎಸ್‌ಟಿ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದೆ. ಮೆಡಿಕಲ್‌, ಅಗತ್ಯ ವೈದ್ಯಕೀಯ ಸೇವೆಗಳು, ಬ್ಯಾಂಕ್‌ಗಳು ಹಾಗೂ ಶಾಲಾ ಕಾಲೇಜುಗಳು ಸಾಮಾನ್ಯವಾಗಿ ಕಾರ್ಯ ನಿರ್ವಹಿಸಲಿವೆ.

ರಾಜ್ಯದಲ್ಲಿ ಎಂದಿನಂತೆ ದೈನಂದಿನ ಚಟುವಟಿಕೆಗಳು ಆರಂಭಗೊಂಡಿದ್ದು, ಯಾವ ಭಾಗದಲ್ಲಿ ಬಂದ್‌ ಕಾವು ಇರಲಿದೆ ಎಂದು ಇನ್ನಷ್ಟೇ ತಿಳಿಯಬೇಕಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸ್ ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…

26 mins ago

ರಾಜ್ಯದ ಜನತೆಗೆ ದರ ಏರಿಗೆ ಶಾಕ್‌ : ಏಪ್ರಿಲ್‌ನಿಂದ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…

42 mins ago

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

1 hour ago

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

3 hours ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

3 hours ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

4 hours ago