ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಅನೇಕ ದಿನನಿತ್ಯದ ವ್ಯವಹಾರಗಳ ಮೇಲೆ ನೇರ ಪರಿಣಾಮ ಬೀರಲಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳು, ಸರ್ಕಾರಿ ಕಚೇರಿಗಳು, ಸಾರಿಗೆ ಸೇವೆಗಳು ಮತ್ತು ಮಾರುಕಟ್ಟೆಗಳು ಪರಿಣಾಮ ಬೀರುವ ಸಾಧ್ಯತೆಯಿದೆ.
ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಪ್ರಸ್ತಾವಿತ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸುತ್ತಿರುವ ರೈತ ಗುಂಪುಗಳ ಬೆಂಬಲದೊಂದಿಗೆ, ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯಿಂದ ಕರೆ ಬಂದಿದೆ. ಭಾರತ್ ಬಂದ್ಗೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. INTUC, AITUC, HMS, CITU, AIUTUC, TUCC, SEWA, AICCTU, LPF ಮತ್ತು UTUC ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಕರೆ ನೀಡಿವೆ. ರೈತ ಸಂಘಟನೆಗಳಾದ ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಅಖಿಲ ಭಾರತ ಕಿಸಾನ್ ಸಭಾ (AIKS) ಸಂಪೂರ್ಣ ಬೆಂಬಲ ನೀಡಿವೆ.
ಶಾಲಾ, ಕಾಲೇಜು ಬಂದ್?
ದೇಶದಾದ್ಯಂತ ಶಾಲೆಗಳು ಮತ್ತು ಕಾಲೇಜುಗಳಿಗೂ ರಜೆ ನೀಡುವ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಆದರೆ ಅನೇಕ ರಾಜ್ಯಗಳ ವಿದ್ಯಾರ್ಥಿ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ.
ಇನ್ನು, ಕರ್ನಾಟಕದಲ್ಲಿ ಸಹ ಶಾಲಾ-ಕಾಲೇಜುಗಳಿಗೆ ರಜೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ ನಾಳಿನ ಪ್ರತಿಭಟನೆಯ ತೀವ್ರತೆ ಮೇಲೆ ರಜೆ ಬಗ್ಗೆ ತೀರ್ಮಾನ ತಗೆದುಕೊಳ್ಳುವ ಸಾಧ್ಯತೆ ಇದೆ.
ಸಾರಿಗೆ, ಬ್ಯಾಂಕಿಂಗ್ ಸೇವೆ…
ಸದ್ಯ ನಾಳೆ ನಡೆಯುವ ಭಾರತ್ ಬಂದ್ನಿಂದ ಸಾರ್ವಜನಿಕ ವಲಯದ ಬ್ಯಾಂಕುಗಳು, ಸರ್ಕಾರಿ ಕಚೇರಿಗಳು, ಸಾರಿಗೆ ಸೇವೆಗಳು, ಮಾರುಕಟ್ಟೆಗಳು ಮತ್ತು ಹೋಟೆಲ್ಗಳ ಮೇಲೆ ಪರಿಣಾಮ ಬೀರಬಹುದು.
ಏನೆಲ್ಲಾ ಲಭ್ಯ?
ಆಸ್ಪತ್ರೆ ಮತ್ತು ಆಂಬುಲೆನ್ಸ್
ವಿಮಾನ ಸೇವೆ
ಎಟಿಎಂ ಮತ್ತು ಆನ್ಲೈನ್ ಬ್ಯಾಕಿಂಗ್
ಭಾರತ ಬಂದ್ಗೆ ಕಾರಣ ಏನು?
ಇನ್ನು, ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಅಖಿಲ ಭಾರತ ಕಿಸಾನ್ ಸಭಾ (AIKS) ನಂತಹ ರೈತ ಸಂಘಟನೆಗಳು ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಿವೆ. ಈಗಾಗಲೇ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, SKM ಪ್ರಸ್ತಾವಿತ ವ್ಯಾಪಾರ ಒಪ್ಪಂದ ಚೌಕಟ್ಟನ್ನು ಅಮೆರಿಕದ ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಭಾರತೀಯ ಕೃಷಿಯ ಸಂಪೂರ್ಣ ಶರಣಾಗತಿ ಎಂದು ಹೇಳಿದೆ. ಭಾರತೀಯ ಮಾರುಕಟ್ಟೆಗಳನ್ನು ಡೈರಿ ಉತ್ಪನ್ನಗಳು, ಪಶು ಆಹಾರ, ಸೋಯಾಬೀನ್ ಎಣ್ಣೆ ಮತ್ತು ಇತರ ಕೃಷಿ ಆಮದುಗಳಿಗೆ ತೆರೆಯುವುದರಿಂದ ದೇಶೀಯ ರೈತರಿಗೆ ಹಾನಿಯಾಗಬಹುದು ಎಂದು ತಿಳಿಸಿದೆ.
ಯುಕೆ, ನ್ಯೂಜಿಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ಮುಕ್ತ ವ್ಯಾಪಾರ ಒಪ್ಪಂದಗಳಲ್ಲಿ ಡೈರಿ ಉತ್ಪನ್ನಗಳನ್ನು ಸೇರಿಸುವ ಬಗ್ಗೆ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ರಾಜೀನಾಮೆಗೆ SKM ಒತ್ತಾಯಿಸಿದೆ. ವ್ಯಾಪಾರ ಒಪ್ಪಂದಗಳು ಭಾರತದ ಕೃಷಿ ಮತ್ತು ಡೈರಿ ಕ್ಷೇತ್ರಗಳ ಮೇಲೆ ದೀರ್ಘಕಾಲೀನ ಪರಿಣಾಮಗಳನ್ನು ಬೀರಬಹುದು ಎಂದು ಎಚ್ಚರಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…