ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್ ರೈಸ್ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.
ಈ ಯೋಜನೆಯ ಅಡಿ 29 ರೂಗೆ 1 ಕೆಜಿ ಅಕ್ಕಿ, 27.50 ರೂಗೆ 1 ಕೆಜಿ ಗೋಧಿಹಿಟ್ಟು, 60 ರೂಗೆ 1 ಕೆಜಿ ಕಡಲೆ ಬೇಳೆ ಮಾರಾಟ ಮಾಡಲಾಗುತ್ತಿತ್ತು. ಜನಸಂದಣಿ ಹೆಚ್ಚು ಇರುವ ಜಾಗಗಳಲ್ಲಿ ಮೊಬೈಲ್ ವ್ಯಾನ್ ಮೂಲಕ ಅಕ್ಕಿ ಬೇಳೆಯನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್.10ರವರೆಗೆ ಕೇಂದ್ರ ಸರ್ಕಾರದ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.
ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್ ರೈಸ್ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ.
ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ತೀವ್ರ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗುತ್ತಿದೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…