ಬೆಂಗಳೂರು: ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಭಾರತ್ ರೈಸ್ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್ ರೈಸ್ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.
ಈ ಯೋಜನೆಯ ಅಡಿ 29 ರೂಗೆ 1 ಕೆಜಿ ಅಕ್ಕಿ, 27.50 ರೂಗೆ 1 ಕೆಜಿ ಗೋಧಿಹಿಟ್ಟು, 60 ರೂಗೆ 1 ಕೆಜಿ ಕಡಲೆ ಬೇಳೆ ಮಾರಾಟ ಮಾಡಲಾಗುತ್ತಿತ್ತು. ಜನಸಂದಣಿ ಹೆಚ್ಚು ಇರುವ ಜಾಗಗಳಲ್ಲಿ ಮೊಬೈಲ್ ವ್ಯಾನ್ ಮೂಲಕ ಅಕ್ಕಿ ಬೇಳೆಯನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್.10ರವರೆಗೆ ಕೇಂದ್ರ ಸರ್ಕಾರದ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.
ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್ ರೈಸ್ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ.
ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ತೀವ್ರ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್ ರೈಸ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗುತ್ತಿದೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…