ʼಆಪರೇಷನ್‌ ಸಿಂದೂರʼ ಯಶಸ್ವಿ ಹೇಗಾಗುತ್ತದೆ : ಭೂಪೇಶ್‌ ಬಾಘೇಲ್‌ ಪ್ರಶ್ನೆ

ಹೊಸದಿಲ್ಲಿ : ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಆಪರೇಷನ್‌ ಸಿಂದೂರದ ಯಶಸ್ಸನ್ನು ಛತ್ತೀಸ್‌ಗಢದ ಮಾಜಿ ಸಿಎಂ ಮತ್ತು ಕಾಂಗ್ರೆಸ್‌ ನಾಯಕ ಭೂಪೇಶ್‌ ಬಾಘೇಲ್‌ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ತೆತ್ತಿರುವುದು ಹಾಗೂ ಜೀವಹಾನಿ ಗಮನಿಸಿದರೆ ಕಾರ್ಯಾಚರಣೆ ಯಶಸ್ವಿಯಾಗಿದೇ ಎಂದು ಹೇಗೆ ಅನಿಸುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.

ಕಾಶ್ಮೀರದಲ್ಲಿ ಜೀವಹಾನಿಯನ್ನು ತಡೆಯುವಲ್ಲಿ ವಿಫಲವಾದವರು ಯಾರು ಎಂದು ಪ್ರಶ್ನಿಸಿದ ಭೂಪೇಶ್‌, ಈ ಲೋಪಕ್ಕೆ ಹೊಣೆ ಯಾರು? ಪ್ರವಾಸಿಗರನ್ನು ಕೊಂದ ಆ ಭಯೋತ್ಪಾದಕರನ್ನು ಸೆರೆಹಿಡಿಯಲು ಆಗಿಲ್ಲ. ಹೀಗಿದ್ದರೂ, ಆಪರೇಷನ್‌ ಸಿಂಧೂರ ಯಶಸ್ವಿ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.

ಕಾಶ್ಮೀರದಲ್ಲಿ ಈಗ ಎಲ್ಲವೂ ಸರಿಯಿದೆ ಎಂಬ ಸರ್ಕಾರದ ಹೇಳಿಕೆಯನ್ನು ಟೀಕಿಸಿದ ಭೂಪೇಶ್‌, ಸರ್ಕಾರದ ಭರವಸೆ ಮೇರೆಗೆ ಜನರು ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದರು. ಆದರೆ, ಅವರಿಗೆ ಅಲ್ಲಿ ಭದ್ರತೆ ಇಲ್ಲದೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಯಾರು? 26 ಜನರನ್ನು ಕೊಂದ ಭಯೋತ್ಪಾದಕರನ್ನು ಸೆರೆಯಿಡಿಯುವಲ್ಲಿ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

4 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

6 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

7 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

7 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

7 hours ago