ಹೊಸದಿಲ್ಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಆಪರೇಷನ್ ಸಿಂದೂರದ ಯಶಸ್ಸನ್ನು ಛತ್ತೀಸ್ಗಢದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಾಘೇಲ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ತೆತ್ತಿರುವುದು ಹಾಗೂ ಜೀವಹಾನಿ ಗಮನಿಸಿದರೆ ಕಾರ್ಯಾಚರಣೆ ಯಶಸ್ವಿಯಾಗಿದೇ ಎಂದು ಹೇಗೆ ಅನಿಸುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.
ಕಾಶ್ಮೀರದಲ್ಲಿ ಜೀವಹಾನಿಯನ್ನು ತಡೆಯುವಲ್ಲಿ ವಿಫಲವಾದವರು ಯಾರು ಎಂದು ಪ್ರಶ್ನಿಸಿದ ಭೂಪೇಶ್, ಈ ಲೋಪಕ್ಕೆ ಹೊಣೆ ಯಾರು? ಪ್ರವಾಸಿಗರನ್ನು ಕೊಂದ ಆ ಭಯೋತ್ಪಾದಕರನ್ನು ಸೆರೆಹಿಡಿಯಲು ಆಗಿಲ್ಲ. ಹೀಗಿದ್ದರೂ, ಆಪರೇಷನ್ ಸಿಂಧೂರ ಯಶಸ್ವಿ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.
ಕಾಶ್ಮೀರದಲ್ಲಿ ಈಗ ಎಲ್ಲವೂ ಸರಿಯಿದೆ ಎಂಬ ಸರ್ಕಾರದ ಹೇಳಿಕೆಯನ್ನು ಟೀಕಿಸಿದ ಭೂಪೇಶ್, ಸರ್ಕಾರದ ಭರವಸೆ ಮೇರೆಗೆ ಜನರು ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದರು. ಆದರೆ, ಅವರಿಗೆ ಅಲ್ಲಿ ಭದ್ರತೆ ಇಲ್ಲದೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಯಾರು? 26 ಜನರನ್ನು ಕೊಂದ ಭಯೋತ್ಪಾದಕರನ್ನು ಸೆರೆಯಿಡಿಯುವಲ್ಲಿ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…