ಹೊಸದಿಲ್ಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ ಮಿಲಿಟರಿ ಕಾರ್ಯಾಚರಣೆ ಆಪರೇಷನ್ ಸಿಂದೂರದ ಯಶಸ್ಸನ್ನು ಛತ್ತೀಸ್ಗಢದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಾಘೇಲ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ತೆತ್ತಿರುವುದು ಹಾಗೂ ಜೀವಹಾನಿ ಗಮನಿಸಿದರೆ ಕಾರ್ಯಾಚರಣೆ ಯಶಸ್ವಿಯಾಗಿದೇ ಎಂದು ಹೇಗೆ ಅನಿಸುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.
ಕಾಶ್ಮೀರದಲ್ಲಿ ಜೀವಹಾನಿಯನ್ನು ತಡೆಯುವಲ್ಲಿ ವಿಫಲವಾದವರು ಯಾರು ಎಂದು ಪ್ರಶ್ನಿಸಿದ ಭೂಪೇಶ್, ಈ ಲೋಪಕ್ಕೆ ಹೊಣೆ ಯಾರು? ಪ್ರವಾಸಿಗರನ್ನು ಕೊಂದ ಆ ಭಯೋತ್ಪಾದಕರನ್ನು ಸೆರೆಹಿಡಿಯಲು ಆಗಿಲ್ಲ. ಹೀಗಿದ್ದರೂ, ಆಪರೇಷನ್ ಸಿಂಧೂರ ಯಶಸ್ವಿ ಹೇಗಾಗುತ್ತದೆ ಎಂದು ಪ್ರಶ್ನಿಸಿದರು.
ಕಾಶ್ಮೀರದಲ್ಲಿ ಈಗ ಎಲ್ಲವೂ ಸರಿಯಿದೆ ಎಂಬ ಸರ್ಕಾರದ ಹೇಳಿಕೆಯನ್ನು ಟೀಕಿಸಿದ ಭೂಪೇಶ್, ಸರ್ಕಾರದ ಭರವಸೆ ಮೇರೆಗೆ ಜನರು ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋದರು. ಆದರೆ, ಅವರಿಗೆ ಅಲ್ಲಿ ಭದ್ರತೆ ಇಲ್ಲದೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಹೊಣೆ ಯಾರು? 26 ಜನರನ್ನು ಕೊಂದ ಭಯೋತ್ಪಾದಕರನ್ನು ಸೆರೆಯಿಡಿಯುವಲ್ಲಿ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…